CrimeDistricts

ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಹಲ್ಲೆ

ಕೋಲಾರ; ದೇವಸ್ಥಾನದಲ್ಲಿ ಧ್ವನಿವರ್ದಕ ವಿಚಾರವಾಗಿ ನಡೆದ ಗಲಾಟೆಯಲ್ಲಿ ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರ ಮೇಲೆ ಹಲ್ಲೆ ನಡೆದಿದೆ. ಇದರಿಂದಾಗಿ ಅವರ ಒಂದು ಕಣ್ಣು ಊದಿಕೊಂಡಿದ್ದು, ಕೋಟಿಗಾನಹಳ್ಳಿ ರಾಮಯ್ಯ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 ಕೋಲಾರದ SNR ಜಿಲ್ಲಾಸ್ಪತ್ರೆಯಲ್ಲಿ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಹಿತಿ ಹಾಗೂ  ಹಿರಿಯ ಹೋರಾಟಗಾರನ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳ ಕೃತ್ಯಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

  ಕೋಟಿಗಾನಹಳ್ಳಿ ಗ್ರಾಮದ ಮುನೇಶ್ವರ ದೇಗುಲದಲ್ಲಿ ಧ್ವನಿವರ್ದಕ ಹಾಕಲಾಗಿತ್ತು. ಅದರ ಸೌಂಡ್ ಕಡಿಮೆ ಇಡುವಂತೆ ಕೋಟಿಗಾನಹಳ್ಳಿ ರಾಮಯ್ಯ ಹೇಳಿದ್ದಾರೆ. ಇದಕ್ಕೆ ಗ್ರಾಮದ

ಗ್ರಾಮದ ಮಂಜುನಾಥ್‌, ಭೈರಪ್ಪ ಹಾಗೂ ಸುಬ್ಬು ಎಂಬುವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈಗಾಗಲೇ ಪೊಲೀಸರು ಮಂಜುನಾಥ್ ಎಂಬಾತನನ್ನು ಬಂಧಿಸಿದ್ದಾರೆ.

 

Share Post