CrimeNational

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಪತ್ರದ ಮೂಲಕ ಜೀವಬೆದರಿಕೆ ಹಾಕಲಾಗಿದೆ. ಅಲ್ಲದೆ ಭಾರತೀಯ ಕಿಸಾನ್‌ ಮಂಚ್‌ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಕೂಡಾ ಪತ್ರದ ಮೂಲಕ ಕೊಲ್ಲುತ್ತೇವೆಂದು ಬೆದರಿಸಿ ಪತ್ರ ಬರೆದಿದ್ದಾರೆ. ಸಿಎಂಗೆ ಬಂದಿರುವ ಪತ್ರದ ಲಕೋಟೆ ಮೇಲೆ ಪತ್ರ ಕಳುಹಿಸಿದ ವ್ಯಕ್ತಿಯ ಹೆಸರು, ವಿಳಾಸವನ್ನೂ ನಮೂದಿಸಿದ್ದಾರೆ ಎಂದು ತಿಳಿದುಬಂದಿದೆ.

  ಲಖನೌ ಹಾಗೂ ಉತ್ತರ ಪ್ರದೇಶದ ಹಲವು ಧಾರ್ಮಿಕ ಸ್ಥಳಗಳನ್ನು ಸ್ಫೋಟಿಸುವುದಾಗಿ, ಇತ್ತೀಚೆಗೆ ಪತ್ರಗಳು ಬಂದಿದ್ದವು. ಇದೀಗ ಮುಖ್ಯಮಂತ್ರಿಯನ್ನೇ ಕೊಲೆ ಮಾಡುವ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಕಿಸಾನ್‌ ಮಂಚ್‌ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಆಲಂಬಾಗ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗೋಶಾಲೆ ಮತ್ತು ಗೋಸಂರಕ್ಷಣೆ ಹೆಸರಿನಲ್ಲಿ ನಮಗೆ ಸಾಕಷ್ಟು ತೊಂದರೆ ನೀಡಿದ್ದೀರಿ. ಇದೇ ನಿನಗೆ ದುರಾದೃಷ್ಟ ತಂದಿದೆ. ಇದರೊಂದಿಗೆ ಸುಧಾರಿಸಿಕೊಳ್ಳದಿದ್ದರೆ, ಯಾರೂ ಯಾರಿಗೂ ಮಾಡದಂತಹ ಶಿಕ್ಷೆ ನೀಡುವುದಾಗಿ ಪತ್ರದಲ್ಲಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

Share Post