Crime

ಪೋಷಕರು ಬುದ್ಧಿ ಹೇಳಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

ತುಮಕೂರು: ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಯುವಕನಿಗೆ ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ ಆತ ಡೀಸೆಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಸಾವುಬದುಕಿನ ನಡುವೆ ಹೋರಾಡುತ್ತಿದ್ದ ಆತ ಇಂದು ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಕುಣಿಗಲ್‌ ತಾಲ್ಲೂಕಿನ ಬೊಮ್ಮಡಿಗೆರೆ ಗ್ರಾಮದ ಯುವಕ ಯುವಕ ಹನುಮಂತ ಸಾವನ್ನಪ್ಪಿದವನು.

ಇಪ್ಪತ್ತೊಂದು ವರ್ಷದ ಹನುಮಂತ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಈತ ಒಂದು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ ವಿಚಾರ ಇತ್ತೀಚೆಗೆ ಹನುಮಂತನ ಪೋಷಕರಿಗೆ ಗೊತ್ತಾಗಿತ್ತು. ಹೀಗಾಗಿ ಪೋಷಕರು ಹನುಮಂತನನ್ನು ಕರೆದು ಬುದ್ಧಿವಾದ ಹೇಳಿದ್ದಾರೆ. ಈಗಾಗಳೇ ಪ್ರೀತಿಗೀತಿ ಯಾಕೆ ಎಂದು ಪ್ರಶ್ನೆ ಮಾಡಿದ್ದಾರೆ. ಇದರಿಂದ ಕೋಪ ಮಾಡಿಕೊಂಡಿದ್ದ ಹನುಮಂತ, ಖಾಸಗಿ ಶಾಲೆಯ ಮೈದಾನದಲ್ಲಿ ಡೀಸೆಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ. ಡಿಸೆಂಬರ್‌ ೧೭ರಂದು ಈ ಘಟನೆ ನಡೆದಿದ್ದು, ಹನುಮಂತ ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

Share Post