BengaluruCinemaCrime

ನಾಳೆ ಯುವ ರಾಜ್‌ಕುಮಾರ್‌ ವಿಚ್ಛೇದನ ಅರ್ಜಿ ವಿಚಾರಣೆ; ಬೆಂಗಳೂರಿಗೆ ಬಂದ ಶ್ರೀದೇವಿ

ಬೆಂಗಳೂರು; ರಾಘವೇಂದ್ರ ರಾಜ್‌ಕುಮಾರ್‌ ಪುತ್ರ ಯುವ ರಾಜ್‌ಕುಮಾರ್‌ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ನಾಳೆ ಈ ಅರ್ಜಿಯ ವಿಚಾರಣೆ ನಡೆಯಲಿದೆ.. ಯುವ ರಾಜ್‌ಕುಮಾರ್‌ ಪತ್ನಿ ಶ್ರೀದೇವಿ ಭೈರಪ್ಪ ಅವರು ವಿದೇಶದಲ್ಲಿದ್ದರು.. ಕೋರ್ಟ್‌ ನೋಟಿಸ್‌ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ಆಗಮಿಸಿದ್ದು, ನಾಳೆ ಅವರು ಫ್ಯಾಮಿಲಿ ಕೋರ್ಟ್‌ಗೆ ಹಾಜರಾಗುವ ಸಾಧ್ಯತೆ ಇದೆ.. 

ಜೂನ್‌ 6ರಂದು ಯುವ ರಾಜ್‌ ಕುಮಾರ್ ಅವರು ಶ್ರೀದೇವಿ ಭೈರಪ್ಪ ಅವರಿಂದ ವಿಚ್ಛೇದನ ಕೋರಿ ಕೋರ್ಟ್‌ ಮೊರೆ ಹೋಗಿದ್ದರು.. ಇದೇ ವೇಳೆ ವಿದೇಶದಿಂದಲೇ ಶ್ರೀದೇವಿ ಪ್ರತಿಕ್ರಿಯೆ ನೀಡಿದ್ದರು.. ನಾಳೆ ಅವರು ಕೋರ್ಟ್‌ ಮುಂದೆ ಹಾಜರಾಗಿ ತನ್ನ ಅಭಿಪ್ರಾಯ ತಿಳಿಸುವ ಸಾಧ್ಯತೆ ಇದೆ..

 

Share Post