CrimeDistricts

ಲಕ್ಷ್ಮಣ ಸವದಿ ಕಾರು ಪಲ್ಟಿ; ಅಲ್ಲಿ ಏನಾಯ್ತು ಗೊತ್ತಾ..?

ಬೆಳಗಾವಿ; ರಾಯಭಾಗ ತಾಲೂಕಿನ ಹಾರೂಗೇರಿ ಬಳಿ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾರು ಉರುಳಿಬಿದ್ದಿದ್ದು, ಕಾರಿನಲ್ಲಿದ್ದ ಸವದಿ ಸೇರಿ ಎಲ್ಲರೂ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

ಸವದಿ ಅವರ ಕಾರಿಗೆ ಬೈಕೊಂದು ಅಡ್ಡ ಬಂದಿದ್ದು, ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಸವದಿ ಅವರ ಕಾರಿನ ಚಾಲಕ ಸಡನ್‌ ಆಗಿ ಕಾರನ್ನು ಪಕ್ಕಕ್ಕೆ ತಿರುಗಿಸಿದ್ದಾರೆ. ವೇಗದಲ್ಲಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಕಾರಿನಲ್ಲಿದ್ದ ಲಕ್ಷ್ಮಣ ಸವದಿ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.‌

ಕಾರು ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಸಹಾಯಕ್ಕೆ ಧಾವಿಸಿದರು. ಕಾರಿನಲ್ಲಿ ಸಿಲುಕಿದ್ದವರನ್ನು ಹೊರಕ್ಕೆ ತಂದು ರಕ್ಷಣೆ ಮಾಡಿದರು. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

 

Share Post