Districts

ಕಿಡಿಗೇಡಿಗಳಿಂದ ಸಂತ ಆಂಟೋನಿ ವಿಗ್ರಹ ಹಾನಿ

ಚಿಕ್ಕಬಳ್ಳಾಪುರ: ಮತಾಂತರ ನಿಷೇಧ ವಿಧೇಯಕ ಮಂಡನೆ ಬೆನ್ನಲ್ಲೇ ತಾಲೂಕಿನ ಸೂಸೆಪಾಳ್ಯ ಗ್ರಾಮದಲ್ಲಿ ಕಿಡಿಗೇಡಿಗಳು ಸಂತ ಆಂಟೋನಿ ವಿಗ್ರಹ ಹಾನಿಗೊಳಿಸಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇಂದು ಬೆಳಗ್ಗಿನ ಜಾವ ಸೂಸೆಪಾಳ್ಯ ಗ್ರಾಮದಲ್ಲಿ ವಿಗ್ರಹಕ್ಕೆ ಕಿಡಿಗೇಡಿಗಳು ಅಪಮಾನ ಎಸಗಿದ್ದಾರೆ ಎನ್ನಲಾಗ್ತಿದೆ. ಈ ವಿಗ್ರಹವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೂಸೆಪಾಳ್ಯ ಗ್ರಾಮದಲ್ಲಿ ಸುಮಾರು 80 ಕ್ರಿಶ್ಚಿಯನ್ ಕುಟುಂಬಗಳು ವಾಸಿಸುತ್ತಿದ್ದಾರೆ.ರಂಗಧಾಮಯ್ಯ ಕೆರೆ ಕಟ್ಟೆ ಮೇಲಿರುವ ಸೈಂಟ್ ಆಂಟೋನಿ ವಿಗ್ರಹಕ್ಕೆ ಹಾನಿ ಮಾಡಲಾಗಿದೆ ಎಂದು ಚರ್ಚ್ ಫಾದರ್ಟ್ ಸೈಂಟ್​ ಆಂಟೋನಿ ಡ್ಯಾನಿಯಲ್​ ಅವರು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Share Post