CrimeDistricts

ಚಪ್ಪಲಿ ಹಾರ ಹಾಕಿ ಅಂಬೇಡ್ಕರ್‌ ಪ್ರತಿಮೆಗೆ ಅವಮಾನ; ದಲಿತ ಸಂಘಟನೆಗಳಿಂದ ಪ್ರತಿಭಟನೆ

ಕಲಬುರಗಿ; ಅಂಬೇಡ್ಕರ್‌ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ ದುಷ್ಕರ್ಮಿಗಳು ಅವಮಾನ ಮಾಡಿದ್ದಾರೆ. ಕಲಬುರಗಿ ಬಳಿಯ ಕೋಟನೂರ್‌ ಡಿ ಗ್ರಾಮದಲ್ಲಿ ಈ ಕೃತ್ಯ ಎಸಗಲಾಗಿದೆ. ಈ ವಿಷಯ ತಿಳಿದು ದಲಿತ ಸಂಘಟನೆಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. 

ಕಳೆದ ರಾತ್ರಿ ಯಾರೋ ಕಿಡಿಗೇಡಿಗಳು ಕೋಟನೂರ್‌ ಗ್ರಾಮದಲ್ಲಿರುವ ಅಂಬೇಡ್ಕರ್‌ ಪ್ರತಿಮೆಗೆ ಚಪಲ್ಲಿ ಹಾರ ಹಾಕಿದ್ದಾರೆ. ಇದನ್ನು ಖಂಡಿಸಿ ದಲಿತ ಸಂಘಟನೆಗಳ ನೂರಾರು ಕಾರ್ಯಕರ್ತರು ಕಲಬುರಗಿ-ಬೆಂಗಳೂರು ರಸ್ತೆ ತಡೆದಯ ಪ್ರತಿಭಟನೆ ನಡೆಸಿದರು. ಇದೇ ವೇಳೆ ಗೂಡ್ಸ್‌ ವಾಹನವೊಂದಕ್ಕೆ ಕಲ್ಲು ತೂರಿದ ಘಟನೆಯೂ ನಡೆದಿದೆ.

ಕಲಬುರಗಿ ನಗರದ ರಾಮ ಮಂದಿರ ವೃತ್ತ, ಬಸ್ ನಿಲ್ದಾಣ, ಎಸ್​ವಿಪಿ ವೃತ್ತ ಸೇರಿ ಹಲವೆಡೆ ಆಕ್ರೋಶ ಭುಗಿಲೆದ್ದಿದೆ. ಕೆಲವೆಡೆ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ನಗರದಲ್ಲಿ ಅಘೋಷಿತ ಬಂದ್‌ ವಾತಾವರಣ ನಿರ್ಮಾಣವಾಗಿತ್ತು.

Share Post