CrimeDistricts

ಜನರಲ್ ತಿಮ್ಮಯ್ಯ ಪ್ರತಿಮೆಗೆ ಗುದ್ದಿದ ಸರ್ಕಾರಿ ಬಸ್

ಮಡಿಕೇರಿ; ಮಡಿಕೇರಿಯಲ್ಲಿ ಸರ್ಕಾರಿ ಬಸ್ ಒಂದು ಜನರಲ್ ತಿಮ್ಮಯ್ಯ ವೃತ್ತಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಜನರಲ್ ತಿಮ್ಮಯ್ಯ ಅವರ ಪ್ರತಿಮೆ‌ ನೆಲಕ್ಕುರುಳಿದೆ. ಇಂದು ಬೆಳಗ್ಗೆ ಈ ಘಟನೆ ನಡೆದಿದೆ.

ಅಪಘಾತಕ್ಕೀಡಾದ ಬಸ್ ಮಡಿಕೇರಿಯ ಡಿಪೋದಿಂದ ಬಸ್ ನಿಲ್ದಾಣಕ್ಕೆ ಹೊರಟಿತ್ತು. ಈ ವೇಳೆ ಪಿಕಪ್ ವಾಹನವೊಂದು ಅಡ್ಡ ಬಂದಿದೆ. ಇದರಿಂದ ಬಸ್ ಚಾಲಕ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿದ್ದಾನೆ. ಈ ವೇಳೆ ಬಸ್ ಚಾಲಕನ ನಿಯಂತ್ರ ತಪ್ಪಿದೆ. ಸರ್ಕಲ್ ನಲ್ಲಿ ಸ್ಥಾಪಿಸಲಾಗಿದ್ದ ಜನರಲ್ ತಿಮ್ಮಯ್ಯ ಪ್ರತಿಮೆಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಪ್ರತಿಮೆ ನೆಲಕ್ಕುರುಳಿಬಿದ್ದಿದೆ.

ಬಸ್ ನಲ್ಲಿದ್ದ ಚಾಲಕ ಹಾಗೂ ನಿರ್ವಾಹಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸದ್ಯ ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

 

Share Post