DistrictsPolitics

ದರ್ಗಾಗೆ 6 ಕೋಟಿ ದೇಣಿಗೆ ಕೊಟ್ಟ ಜನಾರ್ದನರೆಡ್ಡಿ

ಕೊಪ್ಪಳ; ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಕೊಪ್ಪಳದಲ್ಲಿ ಮನೆ ಮಾಡುವ ಮೂಲಕ ರಾಜಕೀಯಕ್ಕೆ ರೀ ಎಂಟ್ರಿ ಕೊಟ್ಟಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಇದೀಗ ಅವರು ದೇಗುಲ, ದರ್ಗಾಗಳಿಗೆ ಭೇಟಿ ಕೊಡುತ್ತಿದ್ದಾರೆ. ಅದರಲ್ಲೂ ನಿನ್ನೆ ಅವರು ಖಲೀಲುಲ್ಲಾ ದರ್ಗಾಗೆ ಭೇಟಿ ಕೊಟ್ಟಿದ್ದರು. ಈ ವೇಳೆ ದರ್ಗಾ ಅಭಿವೃದ್ದಿಗೆ 6 ಕೋಟಿ ರೂಪಾಯಿ ದೇಣಿಗೆ ಕೊಟ್ಟಿದ್ದಾರೆ.

ಗಂಗಾವತಿಯ ಖಲಿಲುಲ್ಲಾ ಖಾದ್ರಿ ದರ್ಗಾ ಅಭಿವೃದ್ಧಿಗೆ 6 ಕೋಟಿ ರೂ.‌ ದೇಣಿಗೆ ನೀಡಲು ಒಪ್ಪಿಗೆ‌ ನೀಡಿದ್ದಾರೆ. ಈ ಮೂಲಕ ಮಾಜಿ ಶಾಸಕ ಇಕ್ಬಾಲ್ ಅನ್ಸಾರಿ ವೋಟ್ ಬ್ಯಾಂಕ್​ಗೆ ಕೈ ಹಾಕಿದ್ದಾರೆ. ದರ್ಗಾದಲ್ಲೇ 6 ಕೋಟಿ ರೂ. ವೆಚ್ಚದ ಒಪ್ಪಂದವೊಂದಕ್ಕೆ ಸಹಿ ಮಾಡಿದ್ದಾರೆ. ಬೆಳಗಾವಿ ಮೂಲದ ಸ್ಟುಡಿಯೋ ಅಮೀರ್ ಕಂಪನಿಗೆ ಈ ದರ್ಗಾ ಅಭಿವೃದ್ಧಿ ಜವಾಬ್ದಾರಿಯನ್ನು ನೀಡಲಾಗಿದೆ.

Share Post