Districts

ಬಿಜೆಪಿಯವರು ದಾರಿ ತಪ್ಪಿದ ಮಕ್ಕಳು

ಬೆಳಗಾವಿ: ಇಂದು ಮತಾಂತರ ಕಾಯ್ದೆಯನ್ನು ಜಾರಿಗೊಳಿಸಲು ಬಿಜೆಪಿ ಅವರು ಮುಂದಾಗಿದ್ದಾರೆ. ಹೀಗಾಗಿ ಇದರ ಹಿಂದೆ ಬೃಹತ್‌ ಷಡ್ಯಂತ್ರವಿದೆ. ಇದಕ್ಕೆ ನಾವು ಅನುಮತಿ ನೀಡುವುದಿಲ್ಲ. ಬಿಜೆಪಿಯವರು ಮಕ್ಕಳೇ ಲವ್‌ ಜಿಹಾದ್‌ ನಲ್ಲಿದ್ದಾರೆ. ಅದಕ್ಕೆ ಅವರು ಮೊದಲು ಉತ್ತರ ನೀಡಲಿ ಎಂದು ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ ಕಿಡಿಕಾರಿದರು.
ಮಹಾರಾಷ್ಟ್ರದ ಮಾಜಿ ಗೃಹ ಸಚಿವರು ಬೆಳಗಾವಿಯಲ್ಲೇ ಎರಡು ದಿನ ವಾಸ್ತವ್ಯ ಹೂಡಿದ್ದರು. ಆದರೆ ಅವರಿಗೆ ಈ ಮಾಹಿತಿ ಗೊತ್ತಿಲ್ಲ. ಹಾಗಂದ್ರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ. ಈ ಘಟನೆಯ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದೂ ಒತ್ತಾಯಿಸಿದರು.
ಮತಾಂತರ ನಿಷೇಧ ಕಾನೂನಿಗೆ ನಮ್ಮ ವಿರೋಧವಿದೆ. ಒಂದು ವೇಳೆ ವಿಧಾನಪರಿಷತ್‌ ನಲ್ಲಿ ಮಸೂದೆ ಮಂಡಿಸಿದರೆ ವಿರೋಧಿಸುತ್ತೇವೆ. ಬಿಜೆಪಿಯವರು ದಾರಿ ತಪ್ಪಿದ ಮಕ್ಕಳು ಎಂದು ಆಕ್ರೋಶ ಹೊರಹಾಕಿದರು.

Share Post