CrimeDistricts

ಮಂಡ್ಯದಲ್ಲಿ ಭೀಕರ ಅಪಘಾತ; ಕ್ಯಾಂಟರ್‌ನಲ್ಲಿ ಸಿಲುಕಿ ಒದ್ದಾಡಿದ ಚಾಲಕ

ಮಂಡ್ಯ; ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ವೈಟ್‌ ಟ್ಯಾಪಿಂಗ್‌ ಹಾಕುವ ಲಾರಿಗೆ ಕ್ಯಾಂಟರ್‌ ಡಿಕ್ಕಿ ಹೊಡೆದಿದ್ದು, ಕ್ಯಾಂಟರ್‌ ಬಹುತೇಕ ನಜ್ಜುಗುಜ್ಜಾಗಿದೆ. ಚಾಲಕ ಕ್ಯಾಂಟರ್‌ನಲ್ಲಿ ಸಿಲುಕಿ ಕೆಲಕಾಲ ನರಳಾಡಿದ ಘಟನೆ ನಡೆದಿದೆ.

ಮಂಡ್ಯದ ಗೆಜ್ಜಲುಗೆರೆಯ ಬಳಿ ಈ ದುರ್ಘಟನೆ ನಡೆದಿದೆ. ರಾತ್ರಿ ವೇಳೆ ಕಾರ್ಮಿಕರು ಹೆದ್ದಾರಿಯಲ್ಲಿ ವೈಟ್ ಟ್ಯಾಪಿಂಗ್‍ ಮಾಡುತ್ತಿದ್ದರು. ಈ ವೇಳೆ ಕ್ಯಾಂಟರ್ ಟ್ಯಾಂಪಿಗ್ ತುಂಬಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವೈಟ್ ಟ್ಯಾಪಿಂಗ್ ಮಾಡುತ್ತಿದ್ದ ಕಾರ್ಮಿಕನಿಗೂ ಗಂಭೀರ ಗಾಯಗಳಾಗಿವೆ. ಸ್ಥಳೀಯರು ಕ್ಯಾಂಟರ್‌ ಚಾಲಕ ಹಾಗೂ ಕಾರ್ಮಿಕನನ್ನು ರಕ್ಷಿಸಿ ವಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾಮಗಾರಿ ವೇಳೆ ಸೂಚನಾ ಫಲಕ ಅಳವಡಿಸದಿದ್ದುದೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

Share Post