Districts

ಮಹಿಳಾ ಸದಸ್ಯರಿಗೆ ಸ್ಪೀಕರ್‌ ಕಾಗೇರಿ ಸೂಚನೆ

ಬೆಳಗಾವಿ: ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಕುರಿತು ಸುವರ್ಣ ವಿಧಾನ ಸೌಧದದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಕಲಾಪ ವೇಳೆ ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ನೀಡಿರುವ ಹೇಳಿಕೆ ತೀವ್ರ ಚರ್ಚೆಗ್ರಾಸವಾಗಿದೆ. ಹೇಳಿಕೆ ತೀವ್ರ ವಿವಾದ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ರಮೇಶ್ ಕುಮಾರ್ ಕ್ಷಮೆಯಾಚಿಸಿದ್ದಾರೆ. ಈ ಬಗ್ಗೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ರಮೇಶ್‌ ಅವರು ಕ್ಷಮೆ ಕೇಳಿದ್ದಾರೆ. ಇದನ್ನು ಬೆಳೆಸೋದು ಬೇಡ,ಇಲ್ಲಿಗೆ ಬಿಟ್ಟು ಬಿಡೋಣ, ಸದ್ಯ ಕಲಾಪ ಮುಂದುವರಿಸೋಣವೆಂದು ಸ್ಪೀಕರ್‌ ಮಹಿಳಾ ಸದಸ್ಯರಿಗೆ ಸೂಚನೆ ನೀಡಿದ್ದಾರೆ.

Share Post