Districts

ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ

ವಿಜಯ ದಶಮಿ ಜಂಬೂ ಸವಾರಿಗೆ ಕ್ಷಣಗಣನೆ

ಮೈಸೂರು: ವಿಜಯದಶಮಿಯ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಚಿನ್ನದ ಅಂಬಾರಿ ಮೇಲೆ ವಿರಾಜಮಾನಳಾಗುವ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಚಿವ ಎಸ್.ಟಿ. ಸೋಮಶೇಖರ್ ತಾಯಿಯ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದರು.

ಜಂಬೂ ಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಮಂಗಳವಾದ್ಯ, ನಾದ ಸ್ವರ ತಂಡದೊಂದಿಗೆ ಮೆರವಣಿಗೆ ಮೂಲಕ ಅರಮನೆಗೆ ಕರೆತರಲಾಗುತ್ತದೆ. ಉತ್ಸವ ಮೂರ್ತಿಯನ್ನು ಕಣ್ತುಂಬಿಕೊಳ್ಳಲು ಬೆಟ್ಟದ ತಳಭಾಗದ ರಸ್ತೆಯ ಎರಡು ಬದಿ ಭಕ್ತ ಸಮೂಹವೇ ನೆರೆದಿದೆ.

Share Post