CrimeDistricts

ವೇಣೂರು ಸ್ಫೋಟ ಪ್ರಕರಣ; ಅಲ್ಲಿ ಗ್ರೆನೇಡ್‌ ತಯಾರಿಸಲಾಗುತ್ತಿತ್ತೇ..?

ಮಂಗಳೂರು; ನಿನ್ನೆ ಸಂಜೆ ಮಂಗಳೂರು ಬೆಳ್ತಂಗಡಿ ಬಳಿಯ ವೇಣೂರಿನ ಪಟಾಕಿ ಗೋಡೌನ್‌ನಲ್ಲಿ ಭೀಕರ ಸ್ಫೋಟ ಸಂಭವಿಸಿತ್ತು. ಇದರಲ್ಲಿ ಮೂವರು ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಪೊಲೀಸರು ಆರೋಪಿ, ಗೋಡೌನ್‌ ಮಾಲೀಕ ಸಯ್ಯದ್ ಬಷೀರ್​ನನ್ನು ಬಂಧಿಸಿದ್ದಾರೆ. ವೇಣೂರಿನಿಂದ ಪರಾರಿಯಾಗುತ್ತಿದ್ದ ಬಶೀರ್​ನ ಬೆನ್ನಟ್ಟಿದ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಶೀರ್ ನನ್ನು ಪೊಲೀಸರು ಅಜ್ಞಾತ ಸ್ಥಳದಲ್ಲಿ ವಿಚಾರಣೆ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ. ನಿನ್ನೆ ಬೆಳ್ತಂಗಡಿ ತಾಲೂಕಿನ ವೇಣೂರು ಗೋಳಿಯಂಗಡಿ ಸಮೀಪದ ಪಟಾಕಿ ತಯಾರಿಕ ಘಟಕದಲ್ಲಿ ಐದು ಬಾರಿ ಭೀಕರ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದರೆ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಆದ್ರೆ ಈ ಸ್ಫೋಟದ ಸ್ಥಳದಲ್ಲಿ ಸಿಕ್ಕಿರುವ ವಸ್ತುಗಳು ಹಲವು ಅನುಮಾನಗಳಿಗೆ ಕಾರಣವಾಗಿದೆ. ಗ್ರೆನೇಡ್‌ ರೀತಿಯ ವಸ್ತುಗಳು ಪತ್ತೆಯಾಗಿದ್ದು, ಇಲ್ಲಿ ಗ್ರೇನೇಡ್‌ಗಳ ತಯಾರಿ ನಡೆಯುತ್ತಿತ್ತೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

Share Post