CrimeDistricts

ಸಿ.ಪಿ.ಯೋಗೇಶ್ವರ್ ನಾಪತ್ತೆ ಪ್ರಕರಣ; ಕಾರು ಪತ್ತೆ, ಕಾರಿನ ಮೇಲೆ ರಕ್ತದ ಕಲೆ

ಚಾಮರಾಜನಗರ; ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಾವ ಮಹದೇವಯ್ಯ ಕಾಣೆಯಾಗಿದ್ದರ ಬಗ್ಗೆ ಸುದ್ದಿಯಾಗಿತ್ತು. ಅವರು ಕಾಣೆಯಾಗಿ ಮೂರು ದಿನ ಕಳೆದರೂ ಪತ್ತೆಯಾಗಿಲ್ಲ. ಈ ನಡುವೆ ಅವರು ಬಳಸುತ್ತಿದ್ದ ಕಾರು, ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ರಾಮಾಪುರ ಬಳಿ ಪತ್ತೆಯಾಗಿದೆ. ಕಾರಿನ ಟೈ ಲ್ಯಾಂಪ್ ಬಳಿ ರಕ್ತದ ಕಲೆ ಪತ್ತೆಯಾಗಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಪೊರೆನ್ಸಿಕ್ ತಜ್ಞರು ಹಾಗೂ ರಾಮನಗರ ಪೊಲೀಸ್ ತನಿಖಾ ತಂಡ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದೆ.

 

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಮಹದೇವಯ್ಯ ಎರಡು ದಿನದ ಹಿಂದೆ ನಾಪತ್ತೆಯಾಗಿದ್ದರು. ಇದೀಗ ಅ ಕಾರು ಸಿಕ್ಕಿದ್ದು ಅದರ ಮೇಲೆ ರಕ್ತದ ಕಲೆ ಇದೆ. ಇದು ಆತಂಕಕ್ಕೆ ಕಾರಣವಾಗಿದೆ.

 

 ಉದ್ಯಮಿ ಹಾಗೂ ಮೆಗಾಸಿಟಿ ನಿರ್ದೇಶಕ ಮಹದೇವಯ್ಯ ಅವರ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ.

 

Share Post