Districts

ಸಭಾಪತಿ ಆದೇಶ ಉಲ್ಲಂಘನೆ; 14 ಕಾಂಗ್ರೆಸ್‌ ಸದಸ್ಯರ ಅಮಾನತು

ಬೆಳಗಾವಿ: ಸಭಾಪತಿಯ ಆದೇಶದ ನಂತರವೂ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದ 14 ಕಾಂಗ್ರೆಸ್‌ ಪರಿಷತ್‌ ಸದಸ್ಯರನ್ನು ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಒಂದು ದಿನದ ಮಟ್ಟಿಗೆ ಅಮಾನತು ಮಾಡಿದ್ದಾರೆ.

ಸಭಾಪತಿ ಆದೇಶ ನೀಡಿದ್ದರೂ ಅದನ್ನು ಉಲ್ಲಂಘಿಸಿ ಕಾಂಗ್ರೆಸ್‌ ಸದನ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಈ ನಿರ್ಧಾರ ಕೈಗೊಂಡಿದ್ದಾರೆ. ಪಿ.ಆರ್‌.ರಮೇಶ್‌, ಬಿ.ಕೆ.ಹರಿಪ್ರಸಾದ್‌, ಎಸ್‌,ಆರ್‌ಪಾಟೀಲ್‌, ನಾರಾಯಣಸ್ವಾಮಿ, ಯು.ಬಿ.ವೆಂಕಟೇಶ್‌, ವೀಣಾ ಅಚ್ಚಯ್ಯ ಸೇರಿ 11 ಮಂದಿಯನ್ನು ಅಮಾನತು ಮಾಡಲಾಗಿದೆ.

Share Post