Districts

ಕೆಆರ್‌ಎಸ್‌ ಜಲಾಶಯ ಭರ್ತಿಗೆ ಇನ್ನು 14 ಅಡಿ ಬಾಕಿ

ಮಂಡ್ಯ; ಕಾವೇರಿ ಜಲಾನಯನ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಜಲಾಶಯದ ನೀರಿನ ಮಟ್ಟ 110 ಅಡಿಗೆ ಏರಿಕೆಯಾಗಿದೆ. ಕಳೆದ ಎರಡು ದಿನಗಳಲ್ಲೇ ಜಲಾಶಯದ ಮಟ್ಟ 10 ಅಡಿ ಏರಿಕೆಯಾಗಿದೆ. ಜಲಾಶಯ ಭರ್ತಿಯಾಗಲು ಇನ್ನು ಕೇವಲ 14 ಅಡಿಯಷ್ಟೇ ಬಾಕಿ ಇದೆ.

ಕೆಆರ್‌ಎಸ್‌ ಜಲಾಶಯದ ಗರಿಷ್ಠ ಮಟ್ಟ 124.80 ಅಡಿ ಇದ್ದರೆ, ಇದರಲ್ಲಿ ಈಗಾಗಲೇ 110.82 ಅಡಿ ಭರ್ತಯಾಗಿದೆ. ಈಗಾಗಲೇ ಜಲಾಶಯದಲ್ಲಿ ಬರೋಬ್ಬರಿ 32.554 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನೂ 17 ಟಿಎಂಸಿ ನೀರು ಹಿಡಿಯುವ ಸಾಮರ್ಥ್ಯವಿದೆ. ಮಳೆ ಚೆನ್ನಾಗಿ ಆಗುತ್ತಿರುವುದರಿಂದ ಕೆಆರ್‌ಎಸ್‌ ನೀರು ನಂಬಿಕೊಂಡಿರುವ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.

 

Share Post