Districts

ಅಪ್ಪ-ಅಮ್ಮನ ಜೊತೆ ಜಗಳ; ನೇಣಿಗೆ ಶರಣಾದ ನಾಲ್ಕರ ಬಾಲಕ..!

ಚಿಕ್ಕಮಗಳೂರು: ನಾಲ್ಕನೇ ತರಗತಿ ಬಾಲಕನೊಬ್ಬ ಅಪ್ಪನೊಂದಿಗೆ ಜಗಳವಾಡಿಕೊಂಡು ನೇಣಿಗೆ ಕೊರಳೊಡ್ಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಇಲ್ಲಿಗೆ ಸಮೀಪದ ಆಲ್ದೂರಿನಲ್ಲಿ ಒಂಬತ್ತು ವರ್ಷದ ಬಾಲಕ ಚೇತನ್‌, ಮನೆಯಲ್ಲಿನ ಜೋಕಾಲಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಾಲಕ ಚೇತನ್‌ ಪೋಷಕರು ಹಾವೇರಿ ಜಿಲ್ಲೆಯ ರಾಣಿಬೆನ್ನೂರು ಶೇಷಗಿರಿ ಗ್ರಾಮದವರು.  ನಾಲ್ಕೈದು ವರ್ಷಗಳ ಹಿಂದೆ ಈ ಕುಟುಂಬ ಆಲ್ದೂರಿನ ಹೊಸಳ್ಳಿಗೆ ಬಂದು ನೆಲೆಸಿತ್ತು. ಚೇತನ್‌ ಪೋಷಕರು ಕಾಫಿ ತೋಟಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ನಾಲ್ಕು ದಿನಗಳ ಹಿಂದೆ ಸ್ವಂತ ಊರು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನಲ್ಲಿ ಜಾತ್ರೆ ಇದ್ದ ಕಾರಣ ಎಲ್ಲರೂ ಹೋಗಿದ್ದರು. ಈ ವೇಳೆ ಅಪ್ಪನ ಜೊತೆ ಚೇತನ್‌ ಜಗಳವಾಡಿದ್ದ. ಇದೇ ಕಾರಣಕ್ಕೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

Share Post