Districts

ಈ ಕಾಂಗ್ರೆಸ್‌ ಚೇಲಾಗಳು ಈ ರೀತಿಯ ಕೆಲಸ ಮಾಡುತ್ತಿದ್ದಾರೆ-ಬಿ. ಶ್ರೀರಾಮುಲು

ಗದಗ: ಎಂಇಎಸ್‌ ಪುಂಡಾಟ ಹಾಗೂ ರಾಯಣ್ಣ ಪ್ರತಿಮೆ ಭಗ್ನ ವಿಚಾರವಾಗಿ ಸಚಿವ ಬಿ. ಶ್ರೀರಾಮುಲು ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯನ್ನು ಯಾರು ಮಾಡಿಸ್ತಿದ್ದಾರೆಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಈ ಕಾಂಗ್ರೆಸ್‌ ಚೇಲಾಗಳು ಈ ರೀತಿಯ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಎಂಇಎಸ್‌ ಆರಂಭದಿಂದಲೂ ಪುಂಡಾಟಿಕೆ ಮಾಡುತ್ತಾ ಬಂದಿದೆ. ಮೊದಲೂ ಅವರಿಗೆ ಕುಮ್ಮಕ್ಕು ಕೊಡುವವರನ್ನೂ ಬಂಧಿಸುತ್ತೇವೆ. ಎಂಇಎಸ್‌ ಕೆಲಸಕ್ಕೆ ಮಹಾರಾಷ್ಟ್ರದ ಮುಖ್ಯಮಂತ್ರಿ ಪ್ರಚೋದಿಸುತ್ತಿದ್ದಾರೆ. ಎಂಇಎಸ್‌, ಕಾಂಗ್ರೆಸ್‌ ಯಾರೇ ಆದ್ರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಕಿಡಿಕಾರಿದ್ದಾರೆ.
ಈಗಾಗಲೇ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿಯ ಸುವರ್ಣಸೌಧ ಮುತ್ತಿಗೆ ಹಾಕಲು ಮುಂದಾಗಿದ್ದು, ಈ ವೇಳೆ ಕಾರ್ಯಕರ್ತರು- ಪೊಲೀಸರ ನಡುವೆ ಚಕಮಕಿ ನಡೆದಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ.

Share Post