Districts

ಹುಣಸೂರು ಬಳಿ ಭೀಕರ ಅಪಘಾತ; ಆರು ಮಂದಿ ದುರ್ಮರಣ

ಮೈಸೂರು: ಮರಕ್ಕೆ ಬೊಲೆರೋ ವಾಹನ ಡಿಕ್ಕಿಯಾಗಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕಲ್‌ಬೆಟ್ಟ ಬಳಿ ನಡೆದಿದೆ. ಘಟನೆಯಲ್ಲಿ ಇನ್ನೂ ಮೂವರಿಗೆ ಗಾಯಗಳಾಗಿದ್ದು, ಹಣಸೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹುಣಸೂರಿನಿಂದ ಮದುವೆ ಮುಗಿಸಿ ಪಾಲಿ ಬೆಟ್ಟಕ್ಕೆ ತೆರಳುತ್ತಿರುವಾಗ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅತಿವೇಗವಾಗಿ ಹೋಗುತ್ತಿದ್ದ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಮೃತರೆಲ್ಲರೂ ಕೊಡಗು ಮೂಲದವರು ಎಂದು ತಿಳಿದುಬಂದಿದೆ. ಮೃತರನ್ನು ಅನಿಲ್‌, ಸಂತೋಷ್‌, ರಾಜೇಶ್‌, ವಿನುತ್‌, ದಯಾನಂದ ಹಾಗೂ ಬಾಬು ಎಂದು ಗುರುತಿಸಲಾಗಿದೆ. ಮೃತರು ಕೊಡಗು ತಾಲ್ಲೂಕಿನ ಪಾಲಿಬೆಟ್ಟದವರು ಎಂದು ತಿಳಿದುಬಂದಿದೆ.

 

Share Post