CrimeDistricts

ಶಾಲೆಯಲ್ಲೇ ಹೃದಯಾಘಾತ; ಆರನೇ ತರಗತಿ ವಿದ್ಯಾರ್ಥಿ ಸಾವು

ಹುಬ್ಬಳ್ಳಿ; ಇತ್ತೀಚೆಗೆ ಯುವಕರಲ್ಲೂ ಹೃದಯಾಘಾತ ಸಮಸ್ಯೆ ಹೆಚ್ಚಾಗುತ್ತಿದೆ. ಇತ್ತೀಚೆಗಷ್ಟೇ ಉಡುಪಿಯಲ್ಲಿ ಯುವತಿಯೊಬ್ಬಳು ಕುಸಿದುಬಿದ್ದು ಸಾವನ್ನಪ್ಪಿದ್ದಳು. ಇದೀಗ ಆರನೇ ತರಗತಿ ಬಾಲಕನೊಬ್ಬ ಕೂಡಾ ಸಾವನ್ನಪ್ಪಿದ್ದಾನೆ. ಶಾಲೆಯಲ್ಲೇ ಕುಸಿದುಬಿದ್ದು ಇಹಲೋಕ ತ್ಯಜಿಸಿದ್ದಾನೆ. ಧಾರವಾಡ ಜಿಲ್ಲೆ ಕಲಘಟಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ.

ಕಲಘಟಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮಕ್ತುಮ್ ಮಹ್ಮದ್ ರಫಿ ಮನಿಯಾರ್ (13) ಮೃತ ಬಾಲಕ. ಕುಸಿದುಬಿದ್ದ ತಕ್ಷಣವೇ ಬಾಲಕನನ್ನು ಶಿಕ್ಷಕರು ಕಲಘಟಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರು. ಆದರೆ ಆತ ಅಷ್ಟರಲ್ಲಾಗಲೇ ಸಾವನ್ನಪ್ಪಿದ್ದ ಎಂದು ತಿಳಿದುಬಂದಿದೆ.

Share Post