CrimeDistricts

ಜಗಳೂರಿನಲ್ಲಿ ಭೀಕರ ರಸ್ತೆ ಅಪಘಾ – 7 ಜನ ದುರ್ಮರಣ

ದಾವಣಗೆರೆ : ಮುಂಜಾನೆಯೇ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಜಗಳೂರಿನ ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದಾರೆ. ಇಂಡಿಕಾ ಕಾರು ಒಂದು ಕಾನನಕಟ್ಟೆ ಗ್ರಾಮದ ಸಮೀಪ ಸಾಗುತ್ತಿತ್ತು. ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರಣ 7 ಜನ ಮರಣ ಹೊಂದಿದ್ದಾರೆ.

ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ 6 ಮಂದಿ ಪ್ರಾಣ ಬಿಟ್ಟಿದ್ದಾರೆ. ಇನ್ನೋರ್ವನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಪ್ರಾಣ ಬಿಟ್ಟಿದ್ದಾರೆ. ಮೃತರು ಯಾದಗಿರಿ ಜಿಲ್ಲೆಯ ಶಹಪುರ್‌ ಮೂಲದವರು ಎಂಬುದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಿಲ್ಲ

ನಿದ್ದೆಯ ಮಂಪರಿನಲ್ಲಿ ಡಿವೈಡರ್‌ಗೆ ಗುದ್ದಿರಬಹುದು ಎನ್ನಲಾಗ್ತಿದೆ, ಆದರೆ ಹೆಚ್ಚಿನ ವಿವರ ಇನ್ನು ತಿಳಿಯಬೇಕಿದೆ. ಸ್ಥಳಕ್ಕೆ ದಾವಣಗೆರೆ ಎಸಿಪಿ ಸಿಬಿ ರಿಷ್ಯಂತ್ ಭೇಟಿ ನೀಡಿ ಪರಿಶೀಲನೇ ನಡೆಸಿದ್ದಾರೆ.

Share Post