CrimeDistricts

ಧ್ವಜಾರೋಹಣಕ್ಕೆ ಹೋಗಿದ್ದಾಗ ಗದಗದ ಮನೆಯಲ್ಲಿ ಕಳವು..!

ಗದಗ; ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ನೋಡಲು ಹೋಗಿದ್ದ ಸಮಯದಲ್ಲಿ ಕಳ್ಳರು ಮನೆಗೆ ನುಗ್ಗಿ ಕಳವು ಮಾಡಿರುವ ಘಟನೆ ಗದಗ ನಗರದಲ್ಲಿ ನಡೆದಿದೆ. ಗದಗದ ಸಿದ್ಧಲಿಂಗ ನಗರದ ಬಸವರಾಜ ರಾಯಪೂರ ಎಂಬುವರ ಮನೆಯಲ್ಲಿ ಹಾಡ ಹಗಲೇ ಕಳ್ಳತನವಾಗಿದೆ.

ಸಿದ್ದಲಿಂಗ ನಗರದ ಉದ್ಯಾನವನದಲ್ಲಿ ಇಂದು ಬೆಳಗ್ಗೆ 8 ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಮನೆಯ ಮಾಲೀಕರು ಹಾಗೂ ಅವರ ಪತ್ನಿ ಮನೆಗೆ ಬೀಗ ಹಾಕಿಕೊಂಡು ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಹೋಗಿದ್ದರು. 9 ಗಂಟೆಗೆ ಕಾರ್ಯಕ್ರಮ ಮುಗಿದಿದ್ದು, ಮನೆಗೆ ಬಂದು ನೋಡುವಷ್ಟರಲ್ಲಿ ಕಳ್ಳರು ಕೈಚಳಕ ತೋರಿ ಪರಾರಿಯಾಗಿದ್ದಾರೆ.

ಹಿಂದಿನ ಬಾಗಿಲಿನ ಕೊಂಡಿ ಮುರಿದು ಸುಮಾರು 5 ಲಕ್ಷ ರೂಪಾಯಿ ನಗದು, 250 ಗ್ರಾಂ ಚಿನ್ನಾಭರಣ ಹಾಗೂ ಇತರೆ ಬೆಲೆ ಬಾಳುವ ವಸ್ತುಗಳು ಕಳ್ಳತನವಾಗಿದೆ. ಚಿನ್ನದ ಬಳೆ, ಮಾಂಗಲ್ಯ ಸರ, ಕಿವಿಯೋಲೆ, ಲಾಂಗ್ ಚೈನ್, ಉಂಗುರ ಹೀಗೆ ಅನೇಕ ಚಿನ್ನಾಭರಣಗಳನ್ನು ದೋಚಿದ್ದಾರೆ. ಬೆಳ್ಳಿಯ ಸಾಮಾನುಗಳನ್ನು ಮುಟ್ಟದೇ ಕೇವಲ ಬಂಗಾರ ಹಾಗೂ ಹಣ ಮಾತ್ರ ಕಳ್ಳತನವಾಗಿದೆ ಎಂದು ತಿಳಿದುಬಂದಿದೆ.

 

Share Post