CrimeDistricts

ಲಾರಿಗೆ ಕಾರು ಡಿಕ್ಕಿ; ಮೃತರ ಸಂಖ್ಯೆ 5ಕ್ಕೆ ಏರಿಕೆ

ಚಿತ್ರದುರ್ಗ; ಚಿತ್ರದುರ್ಗದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೇರಿದೆ. ಕಳೆದ ರಾತ್ರಿ ಕಾರೊಂದು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದರಿಂದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇದೀಗ ಮತ್ತೊಬ್ಬರು ಮೃತಪಟ್ಟಿದ್ದಾರೆ. ಇದರಿಂದಾಗಿ ಸಾವಿನ ಸಂಖ್ಯೆ ಐದಕ್ಕೇರಿದೆ. 

ಕೋಲಾರ ಮೂಲದ 24 ವರ್ಷದ ಮಧುಸೂದನ್‌ ಮೃತಪಟ್ಟ ಯುವಕ. ಇವರು ಪಿಎಸ್‌ಐ ಕೋಚಿಂಗ್‌ ಪಡೆಯುತ್ತಿದ್ದರು ಎನ್ನಲಾಗಿದೆ. ಮಧುಸೂದನ್‌ ಅವರು ಭೀಮಾಶಂಕರ್‌ ಕುಟುಂಬದ ಜೊತೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.

ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಈ ದುರಂತ ಸಂಭವಿಸಿತ್ತು. ಕಾರಿನಲ್ಲಿದ್ದವರು ವಿಜಯಪುರದಿಂದ ಚಿಕ್ಕಮಗಳೂರಿಗೆ ಹೋಗುತ್ತಿದ್ದರು. ಭೀಮಾಶಂಕರ್‌ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರು.

ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಈ ಅಪಘಾತ ನಡೆದಿದೆ ಎಂದು ತಿಳಿದುಬಂದಿದೆ.

 

Share Post