CrimeDistricts

ಹನಿಟ್ರ್ಯಾಪ್‌ ಸುಳಿಗೆ ಬಿದ್ದು 50 ಲಕ್ಷ ರೂ. ಕಳೆದುಕೊಂಡ ಚಿನ್ನದ ವ್ಯಾಪಾರಿ

ಮಂಡ್ಯ; ಹನಿಟ್ರ್ಯಾಪ್ ಸುಳಿಗೆ ಮಂಡ್ಯದ ಚಿನ್ನದ ವ್ಯಾಪರಿಯೊಬ್ಬರು ಸಿಲುಕಿದ್ದಾರೆ. ಯುವತಿಯ ಮೋಹಕ್ಕೆ ಬಿದ್ದು ಐವತ್ತು ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಈ ಸಂಬಂಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಚಿನ್ನದ ವ್ಯಾಪಾರಿ ಜಗನ್ನಾಥ್ ಶೆಟ್ಟಿ ದೂರು ನೀಡಿದ್ದಾರೆ.

ಫೆಬ್ರವರಿ 26ರಂದು ಮೈಸೂರಿನಲ್ಲಿ ಈ ಕೃತ್ಯ ಚಿನ್ನದ ವ್ಯಾಪಾರಿಯನ್ನು ಹನಿಟ್ರ್ಯಾಪ್‌ಗೆ ಬೀಳಿಸಲಾಗಿದೆ. ಜಗನ್ನಾಥ್‌ ಅವರು  ಮಂಗಳೂರಿಗೆ ತೆರಳಲು ಆ ದಿನ ರಾತ್ರಿ ಮಂಡ್ಯದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ನಾಲ್ವರು, ಮೈಸೂರಿಗೆ ಡ್ರಾಪ್ ಕೊಡುವುದಾಗಿ ತಿಳಿಸಿದ್ದಾರೆ. ಕಾರಿನಲ್ಲಿ ಕೂರಿಸಿಕೊಂಡು ಕರೆದೊಯ್ದಿದ್ದಾರೆ.  ನಂತರ ಅವರನ್ನು  ಲಾಡ್ಜ್ ರೂಮ್‍ಗೆ ಕರೆದೊಯ್ದಿದ್ದಾರೆ. ರೂಮ್‍ನಲ್ಲಿ ಯುವತಿ ಜೊತೆ ವೀಡಿಯೋ ಚಿತ್ರೀಕರಿಸಿಕೊಂಡು ಬಳಿಕ 4 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ.

ಕೊನೆಗೆ 50 ಲಕ್ಷ ರೂಪಾಯಿ ಕೊಟ್ಟು ಅಲ್ಲಿಂದ ಜಗನ್ನಾಥ್ ತೆರಳಿದ್ದರು. ಆದರೆ ಮತ್ತೆ ಹಣಕ್ಕಾಗಿ ಗ್ಯಾಂಗ್ ಬೇಡಿಕೆ ಇಟ್ಟಿದ್ದಲ್ಲದೇ, ಕೊಲೆ ಮಾಡುವುದಾಗಿ ಬೆದರಿಕೆಯೊಡ್ಡಿದೆ. ಈ ಹಿನ್ನೆಲೆಯಲ್ಲಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

Share Post