CrimeDistricts

ಅನಾರೋಗ್ಯದಿಂದ ಪತ್ನಿ ಸಾವು; ಆತ್ಮಹತ್ಯೆಗೆ ಯತ್ನಿಸಿದ್ದ ಪತಿಯೂ ಮರಣ

ಚಿಕ್ಕೋಡಿ; ಅನಾರೋಗ್ಯದಿಂದ ಪತ್ನಿ ಸಾವನ್ನಪ್ಪಿದ್ದರಿಂದ ತೀವ್ರ ಆಘಾತಕ್ಕೊಳಗಾಗಿದ್ದ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಝೂಂಜರವಾಡ ಗ್ರಾಮದಲ್ಲಿ ನಡೆದಿದೆ.

 

ಸದಾಶಿವ ರಾಮಪ್ಪ ಕಾಂಬಳೆ (26) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಎರಡು ವರ್ಷದ ಹಿಂದೆ ಸದಾಶಿವ ರಾಮಪ್ಪ ಕಾಂಬಳೆ ಅವರು ರೂಪಾ ಅವರನ್ನು ವಿವಾಹವಾಗಿದ್ದರು. ಆದರೆ ಅನಾರೋಗ್ಯಕ್ಕೀಡಾಗಿದ್ದ ರೂಪಾ ಎರಡು ದಿನದ ಹಿಂದೆ ಸಾವನ್ನಪ್ಪಿದ್ದರು. ಇದರಿಂದ ಮನನೊಂದು ಸದಾಶಿವ ರಾಮಪ್ಪ ಕಾಂಬಳೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.  ಕೂಡಲೇ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಆದರೆ ಅವರ ದೇಹ 80 ರಷ್ಟು ಸುಟ್ಟಿದ್ದರಿಂದ ಅವರು ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಆಸ್ಪತ್ರೆಯಲ್ಲಿಯೇ ಸದಾಶಿವ ರಾಮಪ್ಪ ಕಾಂಬಳೆ ಅವರು ಕೊನೆಯುಸಿರೆಳೆದಿದ್ದಾರೆ.

 

Share Post