Districts

ಆಶ್ರಮದಲ್ಲಿ ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಪತ್ನಿ, ಎಸಿಪಿ ಹೆಸರು ಉಲ್ಲೇಖ

ರಾಮನಗರ : ಕಗ್ಗಲೀಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಆಶ್ರಮದಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ತನ್ನ ಪತ್ನಿ ಹಾಗೂ ಎಸಿಪಿಯೊಬ್ಬರು ಕಾರಣ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖ ಮಾಡಿದ್ದಾರೆ. 55ವರ್ಷದ ಈಶ್ವರ್‌ ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

   ಆತ್ಮಹತ್ಯೆ ಮಾಡಿಕೊಂಡ ಈಶ್ವರ್‌ ಆಶ್ರಮದಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಸಹೋದರ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈಶ್ವರ್‌ ಬರೆದ ಡೆತ್‌ನೋಟ್‌ನಲ್ಲಿ ಹೆಂಡತಿ, ಸಂಬಂಧಿಕರು, ಸ್ನೇಹಿತರು, ಜಯನಗರ ಎಸಿಪಿ ಸೇರಿದಂತೆ ಒಟ್ಟು 12 ಜನರ ಹೆಸರನ್ನು ಉಲ್ಲೇಖಿಸಿದ್ದಾರೆ. ನನ್ನ ಪತ್ನಿ ಈ ಹಿಂದೆ ನನ್ನ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಈ ವೇಳೆ ಎಸಿಪಿ ಸರಿಯಾಗಿ ವಿಚಾರಿಸದೆ ನನ್ನನ್ನು ಪೊಲೀಸ್‌ ಠಾಣೆಗೆ ಕರೆಸಿದ್ದರು ಎಂದು ಆರೋಪಿಸಿದ್ದಾರೆ.

Share Post