CrimeDistrictsHealth

ಚಳ್ಳಕೆರೆ ಬಳಿ ಭೀಕರ ಅಪಘಾತ; ಮೂವರು ಮಕ್ಕಳು ಸೇರಿ ನಾಲ್ವರ ದುರ್ಮರಣ!

ಚಿತ್ರದುರ್ಗ; ಚಳ್ಳಕೆರೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಸಾಣಿಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ಎರಡು ವರ್ಷದ ಸಿಂಧುಶ್ರೀ, ಐದು ತಿಂಗಳ ಅಯ್ಯಾಳಪ್ಪ, ಮೂರು ತಿಂಗಳ ರಕ್ಷಾ ಹಾಗೂ 25 ವರ್ಷದ ಲಿಂಗಪ್ಪ ದುರ್ಮರಣಕ್ಕೀಡಾದವರಾಗಿದ್ದಾರೆ. ಎಲ್ಲರೂ ರಾಯಚೂರು ಜಿಲ್ಲೆ ದಂಡಮ್ಮನಹಳ್ಳಿಯವರು ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಯಲ್ಲಮ್ಮ (30), ಮಲ್ಲಮ್ಮ (20), ನಾಗಪ್ಪ(35) ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇವರೆಲ್ಲಾ ದೇವದುರ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.

Share Post