CrimeDistricts

ಅನ್ಯಕೋಮಿನ ಯುವಕನ ಜೊತೆ ಯುವತಿ ಸುತ್ತಾಟ; ಮಂಗಳೂರಲ್ಲಿ ನೈತಿಕ ಪೊಲೀಸ್‌ಗಿರಿ

ಮಂಗಳೂರು; ಅನ್ಯಕೋಮಿನ ಯುವಕನ ಜೊತೆ ಯುವತಿ ಸುತ್ತಾಡುವುದನ್ನು ನೋಡಿದ ಬಜರಂಗದಳದ ಕಾರ್ಯಕರ್ಯರು ಅವರ ಮೇಲೆ ದಾಳಿ ನಡೆಸಲು ಮುಂದಾಗಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ. ಮಂಗಳೂರು ನಗರದ ಮೋರ್ಗನ್ಸ್‌ ಗೇಟ್‌ ಬಳಿ ಈ ಘಟನೆ ನಡೆದಿದೆ.

ಮಂಗಳೂರಿನ ಮಂಕಿಸ್ಟ್ಯಾಂಡ್‌ ನ ಅನ್ಯಕೋಮಿನ ಯುವಕನೊಂದಿಗೆ‌ ಚಿಕ್ಕಮಗಳೂರಿನ‌ ಯುವತಿ ಸುತ್ತಾಡುತ್ತಿದ್ದುದನ್ನು ಬಜರಂಗದಳದ ಕಾರ್ಯಕರ್ತರು ನೋಡಿದ್ದರು. ಮಂಕಿಸ್ಟ್ಯಾಂಡ್‌ ಮಳಿಗೆಯೊಂದರಲ್ಲಿ ಈ ಜೋಡಿ ಉದ್ಯೋಗದಲ್ಲಿದ್ದು, ಇಬ್ಬರೂ ಒಟ್ಟಿಗೆ ಸುತ್ತಾಡುತ್ತಿದ್ದರು. ಸ್ಕೂಟರ್‌ನಲ್ಲಿ ಇಬ್ಬರೂ ಹೋಗುವುದನ್ನು ನೋಡಿ, ಬಜರಂಗದಳದ ಕಾರ್ಯಕರ್ತರು ಸ್ಕೂಟರ್‌ ಅಡ್ಡಹಾಕಿದ್ದಾರೆ. ಇಬ್ಬರನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಎರಡೂ ಕೋಮಿನ ಯುವಕರು ಸ್ಥಳದಲ್ಲಿ ಸೇರಿ ವಾಗ್ವಾದ ಮಾಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪಾಂಡೇಶ್ವರ ಠಾಣೆ ಪೊಲೀಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಪೊಲೀಸರು ಜೋಡಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಜೊತೆಗೆ ಅಕ್ಷಯ್ ರಾವ್ ಹಾಗೂ ಶಿಬಿನ್ ಪಡಿಕಲ್ ಎಂಬಿಬ್ಬರನ್ನು ಕೂಡಾ ಬಂಧಿಸಲಾಗಿದೆ.

Share Post