Districts

ಜನರೇ ಎಂಇಎಸ್‌ ತಿರಸ್ಕರಿಸಿದ್ದಾರೆ; ಸರ್ಕಾರ ನಿಷೇಧಿಸಬೇಕಿಲ್ಲ ಎಂದ ಗೃಹಸಚಿವ

ಬೆಳಗಾವಿ: ರಾಜ್ಯದಲ್ಲಿ ಎಂಇಎಸ್‌ನ್ನು ಸರ್ಕಾರ ನಿಷೇಧ ಮಾಡುವ ಅವಶ್ಯಕತೆ ಇಲ್ಲ. ಬೆಳಗಾವಿಯ ಜನರೇ ಅದನ್ನು ತಿರಸ್ಕಾರ ಮಾಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಕಲಾಪದಲ್ಲಿ ಪಾಲ್ಗೊಳ್ಳುವುದಕ್ಕೂ ಮೊದಲು ಸುವರ್ಣ ವಿಧಾನಸೌಧದ ಬಳಿ ಮಾತನಾಡಿದ ಅವರು, ಎಂಇಎಸ್‌ ನಿಷೇಧಿಸಬೇಕೆಂದು ಕರವೇ ಕಾರ್ಯಕರ್ತರು ನಡೆಸುತ್ತಿರುವ ಹೋರಾಟಕ್ಕೆ ಪ್ರತಿಕ್ರಿಯೆ ನೀಡಿದರು. ಎಂಇಎಸ್‌ನ್ನು ಬೆಳಗಾವಿ ಜನರೇ ತಿರಸ್ಕಾರ ಮಾಡಿದ್ದಾರೆ. ಸರ್ಕಾರ ಎಂಇಎಸ್‌ಗೆ ನಿಷೇಧ ಹೇರುವ ಅಗತ್ಯವಿಲ್ಲ ಎಂದರು.

ಇನ್ನು ಎಂಇಎಸ್‌ ಪುಂಡಾಟಿಕೆ ಪ್ರಕರಣದ ಬಗ್ಗೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಸುತ್ತೇನೆ. ಇಂತಹ ಕೃತ್ಯಗಳನ್ನು ಮಟ್ಟ ಹಾಕುವ ಬಗ್ಗೆ ಕಠಿಣ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Share Post