DistrictsPolitics

ಸಿದ್ದರಾಮಯ್ಯ ಪ್ರಚಾರದ ವೇಳೆ ಅವಘಡ; ಬೈಕ್‌ ಸವಾರನಿಗೆ ಗಾಯ

ಮೈಸೂರು; ಸಿದ್ದರಾಮಯ್ಯ ಅವರು ಇಂದು ವರುಣಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಕಲ್ಕುಂದ ,ಕಾರ್ಯ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಿದ್ದರಾಮಯ್ಯ ಪ್ರಚಾರ‌ ನಡೆಸಿದರು. ಈ ವೇಳೆ ಅಪಘಾತವೊಂದು ನಡೆದಿದೆ. ಸಿದ್ದರಾಮಯ್ಯ ವಾಹನ ಹಿಂಬಾಲಿಸುತ್ತಿದ್ದ ಕಾರಿಗೆ ಬೈಕ್‌ ಡಿಕ್ಕಿ ಹೊಡೆದಿದ್ದು, ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ

ಕಾರ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾರು ಸಿದ್ದರಾಮಯ್ಯ ಅವರ ಕಾರಿನ ಹಿಂದೆ ಹಿಂಬಾಲಿಸುತ್ತಿತ್ತು. ಈ ವೇಳೆ ಬೈಕ್‌ ಆ ಕಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬೈಕ್‌ ಸವಾರ ಕೆಳಗೆ ಬಿದ್ದು, ತೀವ್ರ ರಕ್ತಸ್ರಾವವಾಗಿದೆ. ಗಾಯಾಳುವನ್ನು ನಂಜನಗೂಡು ಆಸ್ಪತ್ರೆಗೆ ಸೇರಿಸಲಾಗಿದೆ.

Share Post