Districts

ಹಗರಿಬೊಮ್ಮನಹಳ್ಳಿ ಬಳಿ ಅಪಘಾತ; ಧರ್ಮಸ್ಥಳಕ್ಕೆ ತೆರಳುತ್ತಿದ್ದವರಿಗೆ ಗಾಯ

ವಿಜಯನಗರ: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಬಳಿಯ ನಂದಿಬಂಡಿ ಗ್ರಾಮದ ಬಳಿ ಟ್ರ್ಯಾಕ್ಟರ್‌ ಹಾಗೂ ಬಸ್‌ ನಡುವೆ ಡಿಕ್ಕಿ ಸಂಭವಿಸಿದೆ. ಇಟ್ಟಿಗೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ಬಸ್‌ ಡಿಕ್ಕಿ ಹೊಡೆದಿದ್ದು, ಏಳು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಹೊಸಪೇಟೆ ಪಟ್ಟಣದಿಂದ ಧರ್ಮಸ್ಥಳಕ್ಕೆ ಅಪಘಾತಕ್ಕೀಡಾದ ಸಾರಿಗೆ ಬಸ್‌ ತೆರಳುತ್ತಿತ್ತೆಂದು ತಿಳಿದುಬಂದಿದೆ. ಗಾಯಾಳುಗಳನ್ನು ಮರಿಯಮ್ಮನಹಳ್ಳಿ ಹಾಗೂ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆ ಸಂಬಂಧ ಮರಿಯಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share Post