Districts

ಹುಬ್ಬಳ್ಳಿ ಬಳಿ ಅಪಘಾತ; ಇಬ್ಬರು ಬಲಿ, ನಾಲ್ವರಿಗೆ ಗಾಯ

ಹುಬ್ಬಳ್ಳಿ: ಹುಬ್ಬಳ್ಳಿಯ ಹೊರವಲಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾಗಿದ್ದು, ಇಬ್ಬರು ದಾರುಣ ಸಾವನ್ನಪ್ಪಿದ್ದಾರೆ. ಗಬ್ಬೂರು ಬೈಪಾಸ್‌ ಬಳಿ ತಡ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿವೆ.

   ಮೃತರು ಚಿಕ್ಕಬಳ್ಳಾಪುರದಿಂದ ದಾಂಡೇಲಿಗೆ ಪ್ರವಾಸ ಹೊರಟಿದ್ದರು. ಇದರ ಮಾರ್ಗಮಧ್ಯೆ ಈ ದುರಂತ ಸಂಭವಿಸಿದೆ. ದುರಂತದಲ್ಲಿ ಚಿಕ್ಕಬಳ್ಳಾಪುರ ವಾಸಿಗಳಾದ ರಂಜಿತ್‌ ಹಾಗೂ ರಾಕೇಶ್‌ ಮೃತಪಟ್ಟಿದ್ದಾರೆ.  ನಿತಿನ್, ಅಮಿತ್​, ಪ್ರಮೋದ್, ಲೋಕೇಶ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿಯಾದ ವೇಗವೇ ದುರ್ಘಟನೆಗೆ ಕಾರಣ ಎಂದು ತಿಳಿದುಬಂದಿದೆ.

Share Post