CrimeDistricts

ಹುಳಿಯಾರ್ ಬಳಿ ಭೀಕರ ಅಪಘಾತ; ನವದಂಪತಿ ದುರ್ಮರಣ

ತುಮಕೂರು: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನವ ದಂಪತಿ ಸ್ಥಳದಲ್ಲೆ ಸಾವನ್ನಪ್ಪಿರುವ ದಾರುಣ ಘಟನೆ ನಡಿದಿದೆ.

ತುಮಕೂರು‌ ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಗೇಟ್ ಬಳಿ ಘಟನೆ ನಡೆದಿದೆ. ಚಿಕ್ಕನಾಯಕನಹಳ್ಳಿ ತಾಲ್ಲೂಕು ತಿಗಳನಹಳ್ಳಿ ಗ್ರಾಮದ ರಘು(35), ಅನುಷಾ(28) ಮೃತ ದುರ್ದೈವಿಗಳು‌.

ಕಳೆದ ಎರಡು ತಿಂಗಳ ಹಿಂದಷ್ಟೆ ಮದುವೆಯಾಗಿದ್ದ ರಘು,ಅನುಷಾ ಸಂಭಂದಿಕರ ಮದುವೆಗೆಂದು ಬಳ್ಳಾರಿಗೆ ತೆರಳುತ್ತಿದ್ದರು, ಈ ವೇಳೆ ಯಮಸ್ವರೂಪಿ ಲಾರಿ ಕಾರಿಗೆ ಡಿಕ್ಕಿಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಕಾರಿನಲ್ಲಿದ್ದ ರಘು,ಅನುಷಾ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ನವದಂಪತಿಗಳ ಸಾವಿನಿಂದ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share Post