CrimeDistricts

ಬಸ್‌ ಹತ್ತುವ ವೇಳೆ ಅವಘಡ; ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸಾವು

ಮಂಡ್ಯ; ಶಕ್ತಿ ಯೋಜನೆ ಜಾರಿಗೆ ಬಂದ ಮೇಲೆ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರ ಓಡಾಟ ಹೆಚ್ಚಾಗಿದೆ. ಹೀಗಾಗಿ ಯಾವಾಗಲೂ ಬಸ್‌ಗಳು ತುಂಬಿ ತುಳುಕುತ್ತಿರುತ್ತವೆ. ಈ ವೇಳೆ ಕೆಲವೊಂದು ಅವಘಡಗಳೂ ನಡೆಯುತ್ತಿವೆ. ಅದೇ ರೀತಿ ಮಹಿಳೆಯೊಬ್ಬರು ಬಸ್‌ ಹತ್ತಲು ಹೋಗಿ ಹಿಂಬದಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. 

ಮಂಡ್ಯ ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಈ ದುರ್ಘಟನೆ ನಡೆದಿದೆ. ಬೆಂಗಳೂರು ಮೂಲದ ಪೂಜಾ ಎಂಬುವವರೇ ಸಾವನ್ನಪ್ಪಿದ ಮಹಿಳೆ. ಬಸ್‌ ವೇಗವಾಗಿ ಬಂದಿದ್ದು, ಚಲಿಸುತ್ತಿದ್ದ ಬಸ್‌ನ್ನೇ ಹತ್ತಲು ಹೋಗಿ ಗಾಬರಿಗೊಂಡು ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಸ್‌ನ ಹಿಂಬದಿ ಚಕ್ರ ಆಕೆಯ ಮೇಲೆ ಹತ್ತಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಮಂಡ್ಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Post