Districts

ಅಡ್ಡಂಡ ಕಾರ್ಯಪ್ಪ ವಜಾಗೊಳಿಸಲು ಆಗ್ರಹ; ಮೈಸೂರಿನಲ್ಲಿ ಪ್ರತಿಭಟನೆ

ಮೈಸೂರು: ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು. ರಂಗಾಯಣ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ರಂಗಾಯಣಯದಲ್ಲಿ ಅವರ ಸಿದ್ಧಾಂತವನ್ನು ಹೇರುತ್ತಿದ್ದಾರೆ. ರಂಗಾಯಣದಲ್ಲಿ ರಾಜಕೀಯ ನಡೆಯುತ್ತಿದೆ. ಹೀಗಾಗಿ ಸರ್ಕಾರ ಕೂಡಲೇ ಅಡ್ಡಂಡ ಕಾರ್ಯಪ್ಪ ಅವರನ್ನು ಅವರ ಹುದ್ದೆಯಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ಅವರೇ ರಾಜೀನಾಮೆ ಕೊಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.


ಅಡ್ಡಂಡ ಕಾರ್ಯಪ್ಪ ವಿರುದ್ಧ ಕ್ರಮ ಕೈಗೊಳ್ಳದೇ ಹೋದರೆ, ಬಹುರೂಪಿ ನಾಟಕೋತ್ಸವಕ್ಕೆ ಪರ್ಯಾಯವಾಗಿ ಬೇರೊಂದು ಉತ್ಸವ ನಡೆಸಬೇಕಾಗುತ್ತದೆ ಎಂದು ಪ್ರತಿಭಟನಾಕರರು ಸರ್ಕಾರವನ್ನು ಎಚ್ಚರಿಸಿದ್ದಾರೆ. ಪ್ರತಿಭಟನೆಯಲ್ಲಿ ರಂಗಕರ್ಮಿ ಸಿ.ಬಸವಲಿಂಗಯ್ಯ, ಹೋರಾಟಗಾರ ಪ.ಮಲ್ಲೇಶ್, ಲಕ್ಷ್ಮೀನಾರಾಯಣ, ಸ್ವರಾಜ್ ಇಂಡಿಯಾದ ಉಗ್ರ ನರಸಿಂಹೇಗೌಡ, ರಂಗಕರ್ಮಿ ಎಸ್.ಆರ್.ರಮೇಶ್, ಮೈಮ್ ರಮೇಶ್, ಜನಾರ್ದನ ಸೇರಿ ಹಲವರು ಪಾಲ್ಗೊಂಡಿದ್ದರು.

Share Post