Districts

ವಕೀಲೆ ಅನುಮಾನಾಸ್ಪದ ಸಾವು; ಪತಿ, ಮಾವನ ವಿಚಾರಣೆ

ಮೈಸೂರು; ಮೈಸೂರಿನ ರಾಮಕೃಷ್ಣನಗರದಲ್ಲಿ ವಕೀಲೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಮೈಸೂರಿನ ರಾಮಕೃಷ್ಣನಗರದ ನಿವಾಸಿ ಚಂದ್ರಕಲಾ(32)ಎಂಬವರೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದವರು.

ಚಂದ್ರಕಲಾ ಅವರು ರಾಮಕೃಷ್ಣ ನಗರ ನಿವಾಸಿ ವಿಚ್ಛೇದಿತ ಪ್ರದೀಪ್ ಎಂಬವರನ್ನು 2019 ರಲ್ಲಿ ಪ್ರೀತಿಸಿ ವಿವಾಹವಾಗಿದ್ದರು. ಇವರಿಗೆ ಆರು ತಿಂಗಳ ಒಂದು ಮಗು ಕೂಡ ಇತ್ತು. ಇಂದು ಬೆಳಗಿನ ಜಾವ ನಾಲ್ಕು ಮೂವತ್ತರ ಸುಮಾರಿಗೆ ಮೃತ ಚಂದ್ರಕಲಾ ಪತಿ ಪ್ರದೀಪ್‌, ಆಕೆಯ ಪೋಷಕರಿಗೆ ಕರೆ ಮಾಡಿ ಮನೆಯ ಬಳಿ ಬರುವಂತೆ ತಿಳಿಸಿದ್ದ. ಬಳಿಕ 6 ಗಂಟೆಯ ಸುಮಾರಿಗೆ ಅವರ ನಿವಾಸಕ್ಕೆ ಸಮೀಪವಿರುವ ಖಾಸಗಿ ಆಸ್ಪತ್ರೆಯ ಬಳಿ ಬರಲು ಹೇಳಿದ್ದ. ಆಸ್ಪತ್ರೆಗೆ ಹೋದಾಗ ಚಂದ್ರಕಲಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿಸಿದ್ದಾನೆ.

ಇದರಿಂದ ಅನುಮಾನಗೊಂಡಿರುವ ಮೃತ ಚಂದ್ರಕಲಾ ಪೋಷಕರು ಇದು ಆತ್ಮಹತ್ಯೆಯಲ್ಲ, ಅಕೆಯ ಅತ್ತೆ-ಮಾವ, ಮತ್ತಾಕೆಯ ಪತಿ ಸೇರಿ ಕೊಲೆ ಮಾಡಿದ್ದಾರೆ ಆರೋಪಿಸಿದ್ದಾರೆ. ಅವರು ವರದಕ್ಷಿಣೆಗಾಗಿ ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಕುವೆಂಪುನಗರ ಠಾಣೆಯ ಇನ್ಸಪೆಕ್ಟರ್ ಚಂದ್ರಕಲಾ ಪತಿ ಮತ್ತು ಮಾವನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಅತ್ತೆ ಪರಾರಿಯಾಗಿದ್ದಾರೆ.

 

Share Post