Districts

ಬಸವರಾಜ್‌ ಬೊಮ್ಮಾಯಿ ಕೋಮುವಾದಿ : ನಟ ಚೇತನ್‌ ಅಹಿಂಸಾ

ದಾವಣಗೆರೆ : ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅಹಿಂಸಾ ಚೇತನ್‌ ಮಾನ್ಯ ಮುಖ್ಯಮಂತ್ರಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಸವರಾಜ್‌ ಬೊಮ್ಮಾಯಿ ಕೋಮುವಾದಿ. ಯಾವ ಮುಖ್ಯಮಂತ್ರಿಗಳು ಕೂಡ ಇಷ್ಟು ಕೋಮುವಾದಿಗಳಾಗಿರಲಿಲ್ಲ.  ಇವರಲ್ಲಿ ಎಲ್ಲರಿಗಿಂತ ಹೆಚ್ಚ ಕೋಮುವಾದ ಇದೆ ಎಂದು ಚೇತನ್‌ ಅಹಿಂಸಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇವದಾಸಿಗಳು ಅತ್ಯಂತ ಹೀನಾಯ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಇದನ್ನು ನೋಡುವಷ್ಟು ತಾಳ್ಮೆ ಸಿಎಂ ಅವರಿಗೆ ಇಲ್ಲ. ಸಿಎಂ ಬೊಮ್ಮಾಯಿ ಒಬ್ಬ ಕೋಮುವಾದಿ ಸಿಎಂ. ಮತಾಂತರ ನಿಷೇಧ ಕಾಯ್ದೆಯು ಸಂವಿಧಾನದ ವಿರೋಧ ನೀತಿ. ಅಂಬೇಡ್ಕರ್, ಬಸವಣ್ಣನವರು ಕೂಡ ಅವರಿಗೆ ಬೇಕಾದ ಧರ್ಮ ಸ್ಥಾಪನೆ ಮಾಡಿದ್ದಾರೆ. ಜನರು ಅವರಿಗೆ ಬೇಕಾದ ಧರ್ಮಕ್ಕೆ ಸೇರಬಹುದು ಎನ್ನುವುದು ಸಂವಿಧಾನದಲ್ಲಿದೆ. ಬಲವಂತವಾಗಿ ಮತಾಂತರ ಮಾಡಿದರೆ ಅದಕ್ಕೆ ಬೇಕಾದ ಕ್ರಮ ಕೈಗೊಳ್ಳಲಿ. ಜನರಿಗೆ ಹೆದರಿಸಿ, ಬೆದರಿಸಿ ಕಾಯ್ದೆ ತರುವುದು ಸರಿಯಲ್ಲ ಎಂದು ಚೇತನ್‌ ಹೇಳಿದ್ದಾರೆ.

Share Post