DistrictsPolitics

ವಿಮಾನ ನಿಲ್ದಾಣ ಬಿಎಸ್‌ವೈ ಹುಟ್ಟುಹಬ್ಬಕ್ಕೆ ಉಡುಗೊರೆ; ಸಿಎಂ ಬೊಮ್ಮಾಯಿ

ಶಿವಮೊಗ್ಗ; ಶಿವಮೊಗ್ಗ ವಿಮಾನ ನಿಲ್ದಾಣ ಬಿಎಸ್‌ವೈ ಅವರ ಕನಸಾಗಿತ್ತು. ಪ್ರಧಾನಿ ಮೋದಿಯವರು ಯಡಿಯೂರಪ್ಪ ಅವರ ಹುಟ್ಟುಹಬ್ಬಕ್ಕೆ ವಿಮಾನ ನಿಲ್ದಾಣ ಉಡುಗೊರೆಯಾಗಿ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಮಲೆನಾಡು ಪ್ರದೇಶಕ್ಕೆ ಒಂದು ದೊಡ್ಡ ಕಾಣಿಕೆ. ಇದರಿಂದ ಈ ಭಾಗದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ. ಜೊತೆ ಇಲ್ಲಿನ ಜನರ ಆರ್ಥಿಕ ಆಭಿವೃದ್ಧಿ ಕೂಡಾ ಆಗಲಿದೆ ಎಂದು ಸಿಎಂ ಇದೇ ವೇಳೆ ತಿಳಿಸಿದರು. ಶಿವಮೊಗ್ಗ ವಿಮಾನ ನಿಲ್ದಾಣ ಒಂದು ಮೈಲುಗಲ್ಲು ಎಂದ ಸಿಎಂ ಬೊಮ್ಮಾಯಿ, ಇದರ ಉದ್ಘಾಟನೆಗೆ ಪ್ರಧಾನಿಯವರೇ ಬರುತ್ತಿರೊಂದು ಈ ಭಾಗದ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ ಎಂದು ಹೇಳಿದರು. ಇನ್ನು ಇದೇ ಕಾರ್ಯಕ್ರಮದಲ್ಲಿ ಪಿಎಂ ಕಿಸಾನ್‌ 13ನೇ ಕಂತನ್ನು ಪ್ರಧಾನಿ ಬಿಡುಗಡೆ ಮಾಡಲಿದ್ದಾರೆ ಎಂದೂ ಸಿಎಂ ಹೇಳಿದರು.

Share Post