Districts

ಉತ್ತರದಲ್ಲಿ ಗಂಗಾ, ದಕ್ಷಿಣದಲ್ಲಿ ಸಿದ್ದಗಂಗಾ; ಕೇಂದ್ರ ಗೃಹಸಚಿವ ಅಮಿತ್‌ ಷಾ

ತುಮಕೂರು; ಉತ್ತರದಲ್ಲಿ ಗಂಗಾ, ದಕ್ಷಿಣದಲ್ಲಿ ಸಿದ್ದಗಂಗಾ. ಗಂಗಾ ಸ್ನಾನ ಮಾಡಿದರೆ ಅನೇಕ ಜನ್ಮದ ಪಾಪಗಳು ನಾಶವಾಗುತ್ತವೆ. ಅದೇ ರೀತಿ ಸಿದ್ದಗಂಗಾ ಕ್ಷೇತ್ರಕ್ಕೆ ಬಂದರೆ ಅನೇಕ ಜನ್ಮಗಳ ಪುಣ್ಯ ಬರುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಷಾ ಹೇಳಿದ್ದಾರೆ.

ತುಮಕೂರಿನಲ್ಲಿ ನಡೆಯುತ್ತಿರುವ ಶಿವಕುಮಾರಶ್ರೀಗಳ 115ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಕುಮಾರ ಶ್ರೀಗಳು ಆಧುನಿಕ ಬಸವಣ್ಣ ಎಂದು ಬಣ್ಣಿಸಿದರು. ನಾನು ಸಿದ್ದಗಂಗಾ ಮಠಕ್ಕೆ ಮೂರು ಬಾರಿ ಬಂದಿದ್ದೇನೆ. ಪ್ರತಿ ಬಾರಿ ಬಂದಾಗಲೂ ಹೊಸ ಚಿಂತನೆಯೊಂದಿಗೆ ವಾಪಸ್ಸಾಗಿದ್ದೇನೆ ಎಂದು ಹೇಳಿದರು.

Share Post