DistrictsPolitics

AMITH SHA; ನೀವು ಬೈದಷ್ಟೂ ಕಮಲ ಅರಳುತ್ತೆ; ಅಮಿತ್‌ ಶಾ

ಬೆಳಗಾವಿ; ಕಾಂಗ್ರೆಸ್‌ನವರು ಬಿಜೆಪಿಯನ್ನು ಹಾಗೂ ಪ್ರಧಾನಿ ಮೋದಿಯವರನ್ನು ಬೈಯ್ಯುತ್ತಿದ್ದಾರೆ. ಅವರು ಬೈದಷ್ಟೂ, ಟೀಕಿಸಿದಷ್ಟೂ ಕಮಲ ಅರಳುತ್ತಾ ಹೋಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ. ಬೆಳಗಾವಿಯಲ್ಲಿ ಬಿಜೆಪಿ ಪ್ರಚಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಮೋದಿಯವರನ್ನು ವಿಷ ಸರ್ಪ ಎಂದು ಕರೆದರು. ಇನ್ನೂ ಏನೇನೋ ಮಾತನಾಡುತ್ತಿದ್ದಾರೆ. ಅವರು ಎಷ್ಟಾದರೂ ಟೀಕೆ ಮಾಡಲಿ. ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನೀವು ಎಷ್ಟು ಬೈಯ್ಯುತ್ತೀರೋ ಅಷ್ಟು ಕಮಲ ಅರಳುತ್ತದೆ. ಮೋದಿಯವರನ್ನು ಬೈದರೆ ನಿಮ್ಮ ಹೊಟ್ಟೆ ತುಂಬುವುದಿಲ್ಲ ಎಂದು ಅಮಿತ್‌ ಶಾ ಹೇಳಿದರು.

Share Post