Districts

ಗೆಲುವು ಸಾಧಿಸಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ

ಹೊಸಪೇಟೆ: ನಗರಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಸರ್ಕಾರಿ ಬಾಲಕಿಯರ ಕಾಲೇಜಿನ ಮತಗಟ್ಟೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಬಂದು ಮತದಾನ ಮಾಡಿದರು. ನಂತರ ಮಾತನಾಡಿದ ಅವರು, ಈ ಹಿಂದೆ ನನಗೆ ಅನುಭವ ಇರಲಿಲ್ಲ. ಹಾಗಾಗಿ ನಾನು ಚುನಾವಣೆಯಲ್ಲಿ ಹೆಚ್ಚು ತೊಡಗಿಕೊಳ್ಳಲು ಆಗಲಿಲ್ಲ. ಈಗ ಸಚಿವನಾಗಿರುವುದರಿಂದ ಜವಾಬ್ದಾರಿ ಜಾಸ್ತಿ ಇದೆ. ಪಕ್ಷದ ಸೇವೆ ಸಲ್ಲಿಸುವ ಅವಕಾಶ ಒದಗಿಬಂದಿದೆ. ಈ ಸಲ ಪಕ್ಷವನ್ನು ಅಧಿಕಾರಕ್ಕೆ ತರಲು ಸಾಕಷ್ಟು ಶ್ರಮಿಸಿದ್ದೇವೆ ಎಂದರು.

Share Post