DistrictsPolitics

ರಾಮನಗರದಲ್ಲಿ ವೇದಿಕೆಯಲ್ಲೇ ಕಿತ್ತಾಡಿದ ಅನಿತಾ -ಅಶ್ವತ್ಥನಾರಾಯಣ

ರಾಮನಗರ; ರಾಮನಗರದಲ್ಲಿ ಬಿಜೆಪಿ, ಜೆಡಿಎಸ್ ನಡುವಿನ ವಾರ್‌ ತಾರಕಕ್ಕೇರುತ್ತಿದೆ. ವೇದಿಕೆ ಮೇಲೆಯೇ ಶಾಸಕಿ ಅನಿತಾ ಕುಮಾರಸ್ವಾಮಿ ಹಾಗೂ ಸಚಿವ ಅಶ್ವತ್ಥನಾರಾಯಣ ವಾಗ್ದಾದ ನಡೆಸಿದ್ದಾರೆ.  ಹಾರೋಹಳ್ಳಿ ನೂತನ ತಾಲೂಕು ಕೇಂದ್ರ ಉದ್ಘಾಟನಾ ಸಮಾರಂಭ ಈ ಜಟಾಪಟಿಗೆ ವೇದಿಕೆಯಾಗಿದೆ.

ಸಮಾರಂಭದಲ್ಲಿ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ನಾವು ಈಗ ಎರಡು ತಾಲೂಕು ಕೇಂದ್ರ ಮಾಡಿದ್ದೇವೆ. ತಾಲೂಕು ಕೇಂದ್ರಕ್ಕೆ ಪೋಸ್ಟ್ ಸ್ಯಾಂಕ್ಷನ್ ಮಾಡಿದ್ದೇವೆ ಎಂದು ಹೇಳಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯ ಶಾಸಕಿ ಅನಿತಾ ಕುಮಾರಸ್ವಾಮಿ, ನಮ್ಮ ಕಾಲದಲ್ಲೇ ಘೋಷಣೆ ಆಗಿತ್ತು ಎಂದರು. ಆಗ ಸಚಿವ ಅಶ್ವಥ್ ನಾರಾಯಣ್, ಆಗಲಿ‌ ಮೇಡಂ ನಿಮ್ಮ ಸರದಿ ಬಂದಾಗ ಬಂದು ಹೇಳಿ ಎಂದರು.

ಘೋಷಣೆ ಎಲ್ಲರೂ ಮಾಡ್ತಾರೆ, ಕೆಲ್ಸ ಮಾಡೋರು ಯಾರು ಎಂದು ಅಶ್ವತ್ಥನಾರಾಯಣ ಅಂದರು. ಇದು ವಾಗ್ವಾದಕ್ಕೆ ಕಾರಣವಾಯ್ತು.

 

Share Post