DistrictsPolitics

ಡಿಕೆಶಿ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ಮತ್ತೊಂದು ಅವಘಡ; ಹೆಲಿಪ್ಯಾಡ್‌ ಬಳಿ ಬೆಂಕಿ..!

ಕಾರವಾರ; ಮೊನ್ನೆಯಷ್ಟೇ ಕೆಪಿಸಿಸಿ ಆಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದಿತ್ತು. ಇದೀಗ ಮತ್ತೊಂದು ಅವಘಡ ಸಂಭವಿಸಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಡಿ.ಕೆ.ಶಿವಕುಮಾರ್‌ ಅವರಿದ್ದ ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ವೇಳೆ ಹೆಲಿಪ್ಯಾಡ್‌ ಬಳಿ ಬೆಂಕಿ ಆವರಿಸಿದ್ದರಿಂದ ಆತಂಕಕ್ಕೆ ಕಾರಣವಾಗಿತ್ತು. ಆದ್ರೆ ಅದೃಷ್ಟವಶಾತ್‌ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

ಚುನಾವಣಾ ಪ್ರಚಾರಕ್ಕಾಗಿ ಡಿ.ಕೆ.ಶಿವಕುಮಾರ್‌ ವಿಶೇಷ ಹೆಲಿಕಾಪ್ಟರ್‌ನಲ್ಲಿ ಹೊನ್ನಾವರಕ್ಕೆ ಬಂದಿದ್ದರು. ರಾಮತೀರ್ಥ ಬಳಿ ಹೆಲಿಪ್ಯಾಡ್‌ ನಿರ್ಮಿಸಲಾಗಿತ್ತು. ಮೈಸೂರಿನಿಂದ ಬಂದ ಹೆಲಿಕಾಪ್ಟರ್‌ ಲ್ಯಾಂಡ್‌ ಆಗುತ್ತಿದ್ದಂತೆ ಹೆಲಿಪ್ಯಾಡ್‌ ಬಳಿಯ ಹುಲ್ಲಿನಲ್ಲಿ ಬೆಂಕಿ ಆವರಿಸಿದೆ. ಹೆಲಿಕಾಪ್ಟರ್‌ ಲ್ಯಾಂಡ್‌ ಆಗಲು ಸಿಗ್ನಲ್‌ ಕೊಡುವ ಸ್ಮೋಕ್‌ ಕ್ಯಾಂಡಲ್‌ನಿಂದ ಬೆಂಕಿ ಆವರಿಸಿತು ಎಂದು ತಿಳಿದುಬಂದಿದೆ.

ಬೆಂಕಿ ಹುಲ್ಲನ್ನು ಆವರಿಸುತ್ತಿದ್ದಂತೆ ಅಲ್ಲಿಂದ ಸಿಬ್ಬಂದಿ ಅದನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share Post