Districts

ಮೀಸಲಾತಿ ವಿಚಾರ; ಸಂಪುಟ ತೀರ್ಮಾನ ಮಾಡುವ ವಿಶ್ವಾಸವಿದೆ – ಬೆಲ್ಲದ್

ಬೆಳಗಾವಿ; ಸಿಎಂ ಬೊಮ್ಮಾಯಿಯವರ ಮೇಲೆ ನಮಗೆ ವಿಶ್ವಾಸವಿದೆ. ಇಂದು ನಡೆಯುವ ಸಂಪುಟ ಸಭೆಯಲ್ಲಿ ಪಂಚಮಸಾಲಿಗರಿಗೆ ೨ಎ ಮೀಸಲಾತಿ ನೀಡುವ ಬಗ್ಗೆ ಘೋಣೆಯಾಗುವ ನಂಬಿಕೆ ಇದೆ ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಬಗ್ಗೆ ಸಿಎಂ ಇಂದು ನಿರ್ಧಾರ ತೆಗೆದುಕೊಳ್ಳುತ್ತಾರೆ. ಆ ವಿಶ್ವಾಸ ನನಗಿದೆ. ಸಂಪುಟ ಸಭೆಯಲ್ಲಿ ಮೀಸಲಾತಿ ಸಂಬಂಧ ನಿರ್ಧಾರ ಕೈಗೊಳ್ಳುವ ಎಲ್ಲಾ ನಂಬಿಕೆ ನನಗಿದೆ ಎಂದರು.

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬಾರದು ಎಂಬ ವಿರೋಧದ ಬಗ್ಗೆ ಪ್ರತಿಕ್ರಿಯೆ ನೀಡಿದ ಬೆಲ್ಲದ್ ಅವರು, ಒಂದು ಮನೆ ಅಂದ ಮೇಲೆ ಭಿನ್ನಾಭಿಪ್ರಾಯ ಇದ್ದೇ ಇರುತ್ತೆ. ಎಲ್ಲರೂ ಅವರವರ ಅಭಿಪ್ರಾಯ ತಿಳಿಸಿದ್ದಾರೆ. ನಮಗೆ ಸರ್ಕಾರದ ಮೇಲೆ ಭರವಸೆ ಇದೆ. ಇಲ್ಲದಿದ್ದರೆ ನಮ್ಮ ಮುಂದೆ ನಡೆ ಎಲ್ಲರಿಗೂ ತಿಳಿದಿದೆ ಎಂದರು.

Share Post