DistrictsPolitics

ಅಶ್ವತ್ಥ್ ನಾರಾಯಣ ಮಾನಸಿಕ ಅಸ್ವಸ್ಥನಾಗಿದ್ದಾನೆ; ಸಿದ್ದರಾಮಯ್ಯ ತಿರುಗೇಟು

ಬಾಗಲಕೋಟೆ;  ನಿನ್ನೆ ಸಚಿವ ಅಶ್ವತ್‌ ನಾರಾಯಣ್‌ ಮಂಡ್ಯದಲ್ಲಿ ಸಿದ್ದರಾಮಯ್ಯ ವಿರುದ್ಧ ಜನರನ್ನ ಪ್ರಚೋದಿಸುವ ಹೇಳಿಕೆ ನಿಡಿದ್ದರು. ಸಿದ್ದರಾಮಯ್ಯರನ್ನ ಟಿಪ್ಪುನನ್ನ ಹೊಡೆದು ಹಾಕಿದಂತೆ ಹೊಡೆದು ಹಾಕ ಬೇಕೆಂದು ಹೇಳಿಕೆ ನಿಡಿದ್ದರು. ಈ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಇದು ಬಿಜೆಪಿಯವರ ಮನಸ್ಥಿತಿ, ಇದು ಅವರ ಸಂಸ್ಕೃತಿ. ಮಹಾತ್ಮ ಗಾಂಧಿ ಹತ್ಯೆ ಮಾಡಿದವರನ್ನು ಬೆಂಬಲಿಸುವ ಬಿಜೆಪಿ ಪಕ್ಷದ ಅಶ್ವತ್ಥ್ ನಾರಾಯಣ ಅವರಿಂದ ಇಂಥ ಹೇಳಿಕೆ ಬಂದಿರುವುದು ಅಚ್ಚರಿಯ ವಿಚಾರವಲ್ಲ ಎಂದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಕಲಾದಗಿಯ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಆತ ಮನುಷ್ಯನೋ ಅಥವಾ ರಾಕ್ಷಸನೋ ನೀವೇ ತಿಳಿದುಕೊಳ್ಳಿ ಎಂದಿದ್ದಾರೆ.  ನೀವು ನನ್ನನ್ನು ಹೊಡೆದು ಹಾಕಲು ಬಿಡ್ತೀರಾ ಎಂದು ನೆರೆದಿದ್ದವರಲ್ಲಿ ಸಿದ್ದರಾಮಯ್ಯ ಕೇಳಿದ್ದಾರೆ. ನಾನು ಟಿಪ್ಪು, ಬಸವಣ್ಣ, ಸಂಗೊಳ್ಳಿ ರಾಯಣ್ಣ ಎಲ್ಲರನ್ನೂ ಗೌರವಿಸುವವನು. ನನಗೆ ಮನುಷ್ಯತ್ವ ಇದೆ, ಎಲ್ಲರೂ ಸಮಾನರೆಂದು ಭಾವಿಸುತ್ತೇನೆ.

ಸಚಿವ ಅಶ್ವತ್‌ ನಾರಾಯಣ್‌ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ್ದಾನೆ. ಆದರೆ ಈ ಸಚಿವನ ವಿರುದ್ಧ ಈವರೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಅಶ್ಚರ್ಯ. ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಅವರ ಸರ್ಕಾರ ನಿದ್ರಿಸುತ್ತಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಜತೆಗೆ, ಅಶ್ವತ್ಥ್ ನಾರಾಯಣ ಮಾನಸಿಕ ಅಸ್ವಸ್ಥನಾಗಿದ್ದಾನೆ ಎಂದು ಟ್ವೀಟ್ ಮಾಡಲಾಗಿದೆ.

Share Post