CrimeDistricts

ಹಿಂದೂ ಯುವತಿ ಜೊತೆ ಪ್ರಯಾಣ; ಯುವಕನಿಗೆ ಹಲ್ಲೆ

ಮಂಗಳೂರು; ಬಸ್‌ನಲ್ಲಿ ಹಿಂದೂ ಯುವತಿ ಜೊತೆ ಪ್ರಯಾಣ ಮಾಡುತ್ತಿದ್ದ ಅನ್ಯ ಕೋಮಿನ ಯುವಕನಿಗೆ ಸಂಘಪರಿವಾರದ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ನಂತೂರಿನ ಜಂಕ್ಷನ್‌ ಬಳಿ ಈ ಘಟನೆ ನಡೆದಿದ್ದು, ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಕಲಾಗಿದೆ.

ಕಾರ್ಕಳದ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಸೈಯದ್ ರಶೀಮ್ ಉಮರ್ (20) ಎಂಬಾತನೇ ಹಲ್ಲೆಗೊಳಗಾದ ಯುವಕ. ಕಾರ್ಕಳ-ನಿಟ್ಟೆ ಮಾರ್ಗವಾಗಿ ಬಸ್‌ ಮಂಗಳೂರಿಗೆ ಬರುತ್ತಿತ್ತು. ಈ ಬಸ್‌ನಲ್ಲಿ ರಶೀಮ್‌ ಉಮರ್‌ ಹಿಂದೂ ಯುವತಿ ಜೊತೆ ಕೂತಿದ್ದ. ಇದನ್ನು ನೋಡಿ ಆತನ ಮೇಲೆ ಹಲ್ಲೆ ನಡೆಸಲಾಗಿದೆ.
ಖಾಸಗಿ ಬಸ್ ನಂತೂರು ಜಂಕ್ಷನ್‌ ತಲುಪಿದಾಗ ನಾಲ್ಕೈದು ಯುವಕರು ಬಸ್ಸಿನೊಳಗೆ ನುಗ್ಗಿ ಯುವಕನ ಮೇಲೆ ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ, ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಯುವಕನನ್ನು ಬಸ್‌ನಿಂದ ಕೆಳಗಿಳಿಸಿ ದೊಣ್ಣೆ ಮತ್ತು ಬೆತ್ತದಿಂದ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.

Share Post