DistrictsPolitics

ಸದ್ಯ ನಾನೇ ಸಿಎಂ, 5 ವರ್ಷ ನಾನೇ ಮುಂದುವರೆಯುತ್ತೇನೆ; ಸಿದ್ದರಾಮಯ್ಯ

ವಿಜಯನಗರ; ಅಧಿಕಾರ ಹಂಚಿಕೆ ವಿಚಾರವಾಗಿ ಯಾರೂ ಬಹಿರಂಗವಾಗಿ ಏನೂ ಮಾತನಾಡಬಾರದು ಅಂತ ಕೆ.ಸಿ.ವೇಣುಗೋಪಾಲ್‌ ಹಾಗೂ ರಣದೀಪ್‌ ಸುರ್ಜೇವಾಲಾ ಅವರು ಎಚ್ಚರಿಕೆ ಕೊಟ್ಟು ಹೋಗಿದ್ದರು. ಆದ್ರೆ ಇದನ್ನು ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಮುರಿದಿದ್ದಾರೆ. ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ.

ಹೊಸಪೇಟೆಯಲ್ಲಿ ಮಾತನಾಡಿರುವ ಅವರು, ನಮ್ಮ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ ಎಂದಿದ್ದಾರೆ. ಐದು ವರ್ಷ ನೀವೇ ಸಿಎಂ ಆಗಿರುತ್ತೀರಾ ಎಂಬು ಪ್ರಶ್ನೆಗೆ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ,  ಸದ್ಯ ನಾನೇ ಮುಖ್ಯಮಂತ್ರಿ, ನಾನೇ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. ಈ ಮೂಲಕ ತಾವೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುವ ಇಂಗಿತ ವ್ಯಕ್ತಪಡಿಸಿದ್ದಾರೆ.

 

Share Post