CrimeDistricts

ಆಸ್ತಿ ವಿಚಾರಕ್ಕೆ 2 ಕುಟುಂಬಗಳ ನಡುವೆ ಜಗಳ; ಯುವಕನಿಗೆ ಗುಂಡೇಟು

ಮಡಿಕೇರಿ; ಕೊಡಗು ಆಸ್ತಿ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಹೊಡೆದಾಟ ನಡೆದಿದೆ. ಈ ವೇಳೆ ಯುವಕನೊಬ್ಬನ ಮೇಲೆ ಗುಂಡು ಹಾರಿಸಿ ಕೊಲೆ ಮಾಡಲು ಯತ್ನಿಸಲಾಗಿದೆ. ಬಿಳಿಗೇರಿ ಎಂಬ ಗ್ರಾಮದಲ್ಲಿ ಈ ಕೃತ್ಯ ನಡೆದಿದೆ. ಯುವಕನ ಮೇಲೆ ಗುಂಡು ಹಾರಿಸಿದ್ದಕ್ಕಾಗಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ಕೂಡಾ ಕೂಡಾ ನಡೆದಿದೆ.

ಎರಡು ಕುಟುಂಬಗಳ ನಡುವೆ ಆಸ್ತಿ ವಿಚಾರವಾಗಿ ಹಲವು ದಿನಗಳಿಂದ ಜಗಳ ನಡೆಯುತ್ತಿತ್ತು. ಅದು ತಾರಕಕ್ಕೇರಿದ್ದು, ತೀರ್ಥ ಎಂಬಾತನ ಮೇಲೆ ಗುಂಡು ಹಾರಿಸಲಾಗಿದೆ. ಇದ್ರಿಂದ ತೀರ್ಥನ ಕೈಗೆ ಸಣ್ಣ ಗಾಯವಾಗಿದೆ. ಆದ್ರೆ ತೀರ್ಥ ಚಲಾಯಿಸುತ್ತಿದ್ದ ಕಾರಿನ ಸೀಟನ್ನು ಗುಂಡು ಸೀಳಿದೆ. ಇದ್ರಿಂದ ರೊಚ್ಚಿಗೆದ್ದ ತೀರ್ಥನ ಕಡೆಯವರು, ಗುಂಡು ಹಾರಿಸಿದ ನಿಶ್ಚಲ್‌ ಮೇಲೆ ತೀವ್ರ ಹಲ್ಲೆ ನಡೆಸಿದ್ದಾರೆ.

Share Post