DistrictsPolitics

ಅಯನೂರು ಮಂಜುನಾಥ್‌ ಬಿಜೆಪಿಗೆ ಗುಡ್‌ಬೈ; ಜೆಡಿಎಸ್‌ ಸೇರ್ಪಡೆ ಸಾಧ್ಯತೆ

ಶಿವಮೊಗ್ಗ; ಬಿಜೆಪಿಯ ಹಿರಿಯ ನಾಯಕ ಹಾಗೂ ಪರಿಷತ್‌ ಸದಸ್ಯ ಆಯನೂರು ಮಂಜುನಾಥ್‌ ಬಿಜೆಪಿ ತೊರೆಯವುದು ಪಕ್ಕಾಗಿದೆ. ಇಂದು ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಪರಿಷತ್‌ ಸ್ಥಾನ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡೋದಾಗಿ ಅವರು ಘೋಷಣೆ ಮಾಡಿದ್ದಾರೆ. ಈ ಬಾರಿ ಅವರು ಶಿವಮೊಗ್ಗ ನಗರ ಕ್ಷೇತ್ರದಿಂದ ಟಿಕೆಟ್‌ ಬಯಸಿದ್ದರು. ಬಿಜೆಪಿ ಪಕ್ಷ ಬೇರೆಯವರಿಗೆ ಮಣೆ ಹಾಕಿದೆ. ಇದರಿಂದ ಬೇಸತ್ತು ಆಯನೂರು ಅವರು, ಬಿಜೆಪಿ ತೊರೆಯುತ್ತಿದ್ದಾರೆ. ಜೆಡಿಎಸ್‌ ಸೇರ್ಪಡೆ ಬಹುತೇಕ ಖಚಿತವಾಗಿದ್ದು, ಜೆಡಿಎಸ್‌ನಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ. 

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರೋಕ್ಷವಾಗಿ ಜೆಡಿಎಸ್‌ ಸೇರುವ ಬಗ್ಗೆ ಮಾತನಾಡಿದ್ದಾರೆ. ನಾನು ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಹೀಗಾಗಿ ಇಂದು ಹುಬ್ಬಳ್ಳಿಗೆ ಹೋಗಿ ಹೊರಟ್ಟಿಗೆ ರಾಜೀನಾಮೆ ಕೊಡುತ್ತೇನೆ. ಬಿಜೆಪಿ ಪಕ್ಷಕ್ಕೂ ರಾಜೀನಾಮೆ ಸಲ್ಲಿಕೆ ಮಾಡುತ್ತೇನೆ ಎಂದು ಹೇಳಿದ್ದಾರೆ.  ಪದವೀಧರರು, ನೌಕರರು, ಕಾರ್ಮಿಕರ ಹಿತರಕ್ಷಣೆಗಾಗಿ ವಿಧಾನ ಸಭೆ ಪ್ರವೇಶ ಬಯಸಿದ್ದೇನೆ. ಗುರುವಾರ ನಾಮಪತ್ರ ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

 

Share Post